ಜಿಲ್ಲಾಧಿಕಾರಿ ಕಚೇರಿ ಎದುರು ಎರಡನೇ ದಿನ ಅನಿರ್ಧಿಷ್ಟ ಧರಣ ಸತ್ಯಾಗ್ರಹ
District collector kalburgi

ಜಿಲ್ಲಾಧಿಕಾರಿ ಕಚೇರಿ ಎದುರು ಎರಡನೇ ದಿನ ಅನಿರ್ಧಿಷ್ಟ ಧರಣ ಸತ್ಯಾಗ್ರಹ
ಕಲಬುರಗಿ: ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ಜಿಲ್ಲಾ ಘಟಕದಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಎರಡನೇ ದಿನ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಯಿತು. ಅನಿರ್ಧಿಷ್ಟ ಧರಣ ಸತ್ಯಾಗ್ರಹ ನಡೆಸಿದ ಅಧಿಕಾರಿಗಳು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶವನ್ನು ಹೊರಹಾಕಿದ್ರು.
ಕೆಸಿಎಸ್ಆರ್ ನಿಯಮ 16ಎ ಅನ್ನು ಮರು ಸ್ಥಾಪಿಸುವಂತೆ, ಮೊಬೈಲ್ ತಂತ್ರಾAಶಗಳ ಕೆಲಸದ ವಿಚಾರದಲ್ಲಿ ಇದುವರೆಗೂ ಆಗಿರುವ ಅಮಾನತ್ತುಗಳನ್ನು ತಕ್ಷಣವೇ ರದ್ದು ಪಡಿಸುವಂತೆ ಹಾಗೂ ಅಂತರ ಜಿಲ್ಲಾ ಪತಿ-ಪತ್ನಿ ಪ್ರಕರಣಗಳ ವರ್ಗಾವಣೆಯನ್ನು ಚಾಲನೆ ನೀಡಿ ಅಂತಿಮ ಆದೇಶಕ್ಕಾಗಿ ಬಾಕಿ ಇರುವ ಪ್ರಕರಣಗಳ ವರ್ಗಾವಣೆ ಆದೇಶ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹಾಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಪ್ರತಿಭಟನಾನಿರತರು ಒತ್ತಾಯಿಸಿದರು. ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಸೈಯದ್ ಜುಬೇರ್ ಅಲಿ, ಕಾರ್ಯದರ್ಶಿ ಕುಮಾರ ಮೇಣಸಿನಕಾಯಿ, ಖಜಾಂಚಿ ರೇವಣಸಿದ್ದಪ್ಪ ಚಂದನಕೇರಿ, ಮಾಜಿ ಅಧ್ಯಕ್ಷ ಗುರುಮೂರ್ತಿ, ರಾಜ್ಯ ಸಂಘ ಸಂಚಾಲಕರಾಜು ಗೋಪಗೆ, ರಾಜ್ಯ ಸರಕಾರಿ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಕೆ.ಕಿರಣಕುಮಾರ ಸತೀಶ ಸಜ್ಜನ,ಕೆ ಸೇರಿದಂತೆ ಅನೇಕರು ಪಾಲ್ಗೊಂಡರು.