ಕೃತಕ ಬುದ್ಧಿಮತ್ತೆ, ಸಾಮಾಜಿಕ ಜಾಲತಾಣಗಳು ಮಾನವನ ಅವಿಭಾಜ್ಯ ಅಂಗವಾಗಿವೆ

ಕೃತಕ ಬುದ್ಧಿಮತ್ತೆ, ಸಾಮಾಜಿಕ ಜಾಲತಾಣಗಳು ಮಾನವನ ಅವಿಭಾಜ್ಯ ಅಂಗವಾಗಿವೆ

ಕೃತಕ ಬುದ್ಧಿಮತ್ತೆ, ಸಾಮಾಜಿಕ ಜಾಲತಾಣಗಳು ಮಾನವನ ಅವಿಭಾಜ್ಯ ಅಂಗವಾಗಿವೆ

ಕೃತಕ ಬುದ್ಧಿಮತ್ತೆ, ಸಾಮಾಜಿಕ ಜಾಲತಾಣಗಳು ಮತ್ತು ಸಮಾಜದ ಮೇಲಿನ ಚರ್ಚೆಯನ್ನು ಪ್ರೋತ್ಸಾಹಿಸಲು ಆಯೋಜಿಸಿದ ಈ ರಾಷ್ಟ್ರೀಯ ವಿಚಾರ ಸಂಕೀರ್ಣ ಮಹಾವಿದ್ಯಾಲಯದ ದೊಡ್ಡ ಪ್ರಯತ್ನವಾಗಿದೆ. ಎಂದು ಗುಜರಾತ್ ಕೇಂದ್ರೀಯ ವಿಶ್ವವಿದ್ಯಾಲಯ ಹಾಗೂ ಗುಲ್ಬರ್ಗಾ ವಿಶ್ವವಿದ್ಯಾಲಯ ಕಲಬುರ್ಗಿಯ ನಿವೃತ್ತ ಕುಲಸಚಿವ ಪ್ರೊ ಎಸ್ ಎಲ್ ಹಿರೇಮಠ ಹೇಳಿದರು 

ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸೀರಿ ಮಹಿಳಾ ಮಹಾವಿದ್ಯಾಲಯದಲ್ಲಿ ನಡೆದ ಕೇಂದ್ರ ಸರ್ಕಾರದ ಎಂ ಎಚ್ ಆರ್ ಡಿ ಅಧಿನ ಸಂಸ್ಥೆಯಾದ ಆಯ್ ಸಿ ಎಸ್ ಎಸ್ ಆರ್,ಎಸ್ ಆರ್ ಸಿ ಪ್ರಾಯೋಜಿತ *ಕೃತಕ ಬುದ್ಧಿಮತ್ತೆ ಸಾಮಾಜಿಕ ಜಾಲತಾಣಗಳು ಹಾಗೂ ಸಮಾಜ* ಎಂಬ ವಿಷಯದ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡುತ್ತಿದ್ದರು 

ತಮ್ಮೆಲ್ಲರಿಗೂ ತಿಳಿದಿರುವ ಹಾಗೆ ಇಂದು ತಂತ್ರಜ್ಞಾನವು ನಮ್ಮೆಲ್ಲಾ ಕಾರ್ಯ ಕ್ಷೇತ್ರ ಅಥವಾ ಕೆಲಸದ ಸ್ಥಳಗಳನ್ನು ಪರಿವರ್ತಿಸಿದೆ. ಇದು ಸಂಪರ್ಕವನ್ನು ಸುಧಾರಿಸಿದೆ. ಸಮಯ ಮತ್ತು ತಂತ್ರಜ್ಞಾನವು ಮತ್ತೆ ಪ್ರಮುಖ ಸವಾಲುಗಳನ್ನು ಪರಿಹರಿಸಲು ಸಹಾಯ ಮಾಡಿದೆ. ಹಾಗಾಗಿ, ಕೃತಕ ಬುದ್ಧಿಮತ್ತೆ ಮತ್ತು ಸಾಮಾಜಿಕ ಜವಾಬ್ದಾರಿ ನಡುವಿನ ಈ ವಿಲೀನವು ಮಾನವ ಸ್ಪರ್ಶದೊಂದಿಗೆ ತಂತ್ರಜ್ಞಾನವನ್ನು ಉತ್ಕೃಷ್ಟಗೊಳಿಸುತ್ತದೆ ಎಂಬುದನ್ನು ನಾನು ಬಲವಾಗಿ ನಂಬಿದ್ದೇನೆ ಎಂದು ಹೇಳುತ್ತಾ ನಾವು ಇಂದು ದೈನಂದಿನ ಚಟುವಟಿಕೆಗಳ ಬಹುಭಾಗವನ್ನು ಆಧುನಿಕ ತಂತ್ರಜ್ಞಾನಗಳ ಮೂಲಕ ನಡೆಸುತ್ತಿದ್ದೇವೆ. ನಮ್ಮ ಎಲ್ಲ ಕೆಲಸಗಳಿಗೂ ಒಂದಲ್ಲ ಒಂದು ರೀತಿಯ ಸಾಧನಬೇಕು. ಅದರಲ್ಲಿ ಇತ್ತೀಚಿಗೆ ಹೊಮ್ಮಿಕೊಂಡಿರುವ ಕೃತಕ ಬುದ್ಧಿಮತ್ತೆ ನಮಗೆ ಅರಿವಿಲ್ಲದೆಯೇ ನಮ್ಮ ಸುತ್ತ ಆವರಿಸಿಕೊಂಡಿದೆ ಎಂದು ಹೇಳಿದರು.

“ಎಐ' ಎಂಬ ತಾಂತ್ರಿಕತೆ ನಮಗೇ ತಿಳಿಯದಂತೆ ಹಿನ್ನಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುತ್ತದೆ. ಇಂದಿನ ಕಾಲದಲ್ಲಿ ಮಕ್ಕಳಿಂದ ವಯೋವೃದ್ಧರ ವರೆಗೆ, ಅವಿದ್ಯಾವಂತರಿಂದ ಸುಶಿಕ್ಷಿತರ ವರೆಗೆ, ಎಲ್ಲರೂ ಯಾವುದೋ ಒಂದು ಕಾರಣಕ್ಕಾಗಿ "ಎಐ' ಶಬ್ದವನ್ನು ತಮ್ಮ ಸಂಭಾಷಣೆಯಲ್ಲಿ ಬಳಸುತ್ತಿರುವುದು ಸಾಮಾನ್ಯವಾಗಿದೆ. ಟಿವಿಯಲ್ಲಿ ಏನಾದರೂ ಅರ್ಥವಾಗದ ವಿಷಯ ಬಂದಾಗ ಅಥವಾ ಮೊಬೈಲ್ನಲ್ಲಿ ಯಾವದೋ ವಿವರಿಸಲು ಕಷ್ಟವಾದ ವಿಷಯ ಎದುರಾಗಿದಾಗ, ನಾವು "ಎಐ' ಶಬ್ದವನ್ನು ಬಳಸುವುದು ಸರ್ವೇ ಸಾಮಾನ್ಯವಾಗಿದೆ.

ಇಂದು ಎಐ ತಂತ್ರಜ್ಞಾನವು ಈಗ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ಇದರಿಂದ ಮುಂಬರುವ ದಿನಗಳಲ್ಲಿ ಇನ್ನು ಹೆಚ್ಚು ಕೆಲವೊಂದು ಕೆಲಸಗಳು ಬದಲಾಗಬಹುದು, ಎಐಯನ್ನು ಬುದ್ದಿಮತ್ತೆಯಿಂದ ಬಳಸುವುದು ಮತ್ತು ಅದರ ಕೌಶಲಗಳನ್ನು ಬೆಳೆಸುವುದು ಭವಿಷ್ಯದಲ್ಲಿ ನಮ್ಮ ಯಶಸ್ಸಿನ ಕೀಲಿಕೈ ಆಗಿರುತ್ತದೆ. ಎಐನಿಂದ ಬರುವ ಸುಧಾರಣೆಗಳನ್ನು ಸಮರ್ಥವಾಗಿ ಬಳಸಿದಾಗ, ನಮ್ಮ ವೈಯಕ್ತಿಕ ಮತ್ತು ವೃತ್ತಿಜೀವನದಲ್ಲಿ ಯಶಸ್ಸು ಸಾಧಿಸಲು ಇದು ಮಹತ್ವದ ಪಾತ್ರವಹಿಸಬಹುದು.

ಪ್ರತಿ ಹಂತದ ಇತಿಹಾಸದ ಪುಟಗಳನ್ನು ತಿರುವಿ ಹಾಕಿದರೆ, ಜ್ಞಾನ ಮತ್ತು ಕಲಿಕೆ ವಿಷಯದಲ್ಲಿ ಭಾರತವು ವಿಶ್ವವನ್ನು ಮುನ್ನಡೆಸಿದೆ. ಈ ಹೊತ್ತಿನ ಮಾಹಿತಿ ತಂತ್ರಜ್ಞಾನ ಯುಗದ ಕಾಲಘಟ್ಟದಲ್ಲಿ, ಭಾರತವು ಮಹೋನ್ನತ ಕೊಡುಗೆ ನೀಡುತ್ತಾ ಬಂದಿದೆ. ಅತ್ಯಂತ ಪ್ರತಿಭಾವಂತ ತಂತ್ರಜ್ಞಾನ ನಾಯಕರು ಮತ್ತು ತಜ್ಞರು ಭಾರತೀಯರಾಗಿದ್ದಾರೆ ಎಂಬುದು ಹೆಮ್ಮೆಯ ವಿಷಯ. ಜಾಗತಿಕಮಾಹಿತಿ ತಂತ್ರಜ್ಞಾನ ಸೇವಾ ಉದ್ಯಮದಲ್ಲಿ ಭಾರತ 'ಶಕ್ತಿ ಮನೆ ಅಥವಾ ಪವರ್ ಹೌಸ್' ಎಂಬುದನ್ನು ಸಾಧಿಸಿ ತೋರಿಸಿದೆ. ನಾವು ಡಿಜಿಟಲ್ ಕ್ಷೇತ್ರದಲ್ಲೂ ಶ್ರೇಷ್ಠತೆಯನ್ನು ಮುಂದುವರಿಸುವ ಮೂಲಕ ಇಡೀ ಜಗತ್ತಿಗೆ ಆನಂದ ಉಂಟುಮಾಡಬೇಕಿದೆ ಎಂದು ಹೇಳುತ್ತಾ

ಕೃತಕ ಬುದ್ಧಿಮತ್ತೆ ತಂತ್ರಜ್ಞಾನದಲ್ಲಿ ಭಾರತವು 'ವಿಶ್ವದ ಗಮ್ಯತಾಣ'ವಾಗಬೇಕು ಎಂದು ನಾವು ಬಯಸುತ್ತೇವೆ. ಹಲವಾರು ಭಾರತೀಯರು ವಿಶೇಷವಾಗಿ ತಂತ್ರಜ್ಞಾನ ನಿಪುಣರು, ವೃತ್ತಿಪರರು, ತಜ್ಞರು ಮತ್ತು ಎಂಜಿನಿಯರ್ಗಳು ಕೃತಕ ಬುದ್ಧಿಮತ್ತೆ ಮೇಲೆ ಈಗಾಗಲೇ ಕೆಲಸ ಮಾಡಿದ್ದಾರೆ. 'ಸಾಮಾಜಿಕ ಸಬಲೀಕರಣಕ್ಕಾಗಿ ಜವಾಬ್ದಾರಿಯುತ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಕೆ' ಸಮಾವೇಶವು ವಿಚಾರಗಳು ಮತ್ತು ಸಮಸ್ಯೆಗಳ ಪರಿಹಾರ ಮತ್ತು ಮಾರ್ಗೋಪಾಯಗಳನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ದೇಶಾದ್ಯಂತ ಹಲವಾರು ಕಾರ್ಯಕ್ರಮಗಳು ಆಯೋಜಿಸಲಾಗುತ್ತಿದೆ. ಉತ್ತಮ ಸಮಾಜ ನಿರ್ಮಾಣದಲ್ಲಿ ನಮ್ಮ ಸ್ವತ್ತುಗಳು ಮತ್ತು ಸಂಪನ್ಮೂಲಗಳ ಸಮರ್ಪಕ ನಿರ್ವಹಣೆಗೆ ನಾವು ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಬಹುದಾ? ಸಮಾಜದ ಹಲವು ಕಡೆ ನಮ್ಮ ಸಂಪನ್ಮೂಲಗಳು ಜಡವಾಗಿವೆ. ಮತ್ತೆ ಕೆಲವೆಡೆ, ಸಂಪನ್ಮೂಲಗಳ ಕೊರತೆ ಇದೆ. ಈ ನಿಟ್ಟಿನಲ್ಲಿ ನಾವು ಕ್ರಿಯಾತ್ಮಕವಾಗಿ ಈ ಸಂಪನ್ಮೂಲಗಳನ್ನು ಮರುಹಂಚಿಕೆ ಅಥವಾ ಪುನವಿರ್ಂಗಡಣೆ ಮಾಡಿ, ಅವುಗಳ ಸಮರ್ಪಕ ಬಳಕೆ ಮಾಡಬಹುದಾ? ನಮ್ಮ ಸಮಾಜದ ನಾಗರಿಕರ ಮನೆ ಬಾಗಿಲಿಗೆ ಪ್ರಾಮಾಣಿಕವಾಗಿ ಮತ್ತು ಕಡುಚೂಟಿಯಾಗಿ (ಚುರುಕಾಗಿ) ಸೇವೆಗಳನ್ನು ವಿತರಿಸುವ ಮೂಲಕ ಅವರನ್ನು ಸಂತೋಷಪಡಿಸಬಹುದಾ? ಎಂದು ಮಾತನಾಡಿದರು. ಸಮಜದ ಭವಿಷ್ಯ ಯುವ ಸಮುದಾಯದ ಮೇಲೆ ನಿಂತಿದೆ ಮತ್ತು ಪ್ರತಿ ಯುವಜೀವದ ಏಳೆಯೇ ಪ್ರಮುಖ ವಿಷಯವಾಗಿದೆ. ಪ್ರತಿ ಮಗುವಿಗೂ ಅನನ್ಯವಾದ ಪ್ರತಿಭೆ, ಸಾಮರ್ಥ್ಯ ಮತ್ತು ಅಭಿರುಚಿ ಇದೆ. ಆದರೆ ಕೆಲವೊಮ್ಮೆ, ಸರಿಯಾದ ವ್ಯಕ್ತಿ ತಪ್ಪಾದ (ಅಡ್ಡ) ದಾರಿ (ಸ್ಥಳ) ಯಲ್ಲಿ ಕೊನೆಗೊಳ್ಳುತ್ತಿದ್ದಾನೆ. ಈ ರೀತಿಯ ಆಧ್ವಾನಗಳನ್ನು ಸರಿಪಡಿಸಲು ಹಾದಿಗಳಿವೆ. ಪ್ರತಿ ಮಗು ಸಮಾಜದಲ್ಲಿ ಬೆಳೆಯುವಾಗ ಅವನನ್ನು ಅಥವಾ ಅವಳನ್ನು ಗಮನಿಸುವುದಾದರೂ ಹೇಗೆ? ಪೋಷಕರು, ಶಿಕ್ಷಕರು ಮತ್ತು ಸ್ನೇಹಿತರು ಸೂಕ್ಷ್ಮವಾಗಿ ಬೆಳೆಯುವ ಮಕ್ಕಳನ್ನು ಗಮನಿಸುತ್ತಾರಾ? ಬಾಲ್ಯದಿಂದ ಹಿಡಿದು ಪ್ರೌಢಾವಸ್ಥೆಗೆ ಬರುವ ತನಕ ಆ ಮಕ್ಕಳನ್ನು ಗಮನಿಸಬೇಕು. ಮತ್ತು, ಅವುಗಳ ದಾಖಲೆಗಳನ್ನು ಇಡಬೇಕು. ಹೀಗೆ ಮಾಡುವುದರಿಂದ ಆ ಮಗುವಿನ ಸ್ವಾಭಾವಿಕ ಗುಣಲಕ್ಷಣಗಳನ್ನು ದೀರ್ಘ ಕಾಲದಲ್ಲಿ ಪತ್ತೆ ಮಾಡಲು ಸಹಾಯಕವಾಗುತ್ತದೆ. ಈ ರೀತಿಯಲ್ಲಿ ನಿರಂತರ ಗಮನ ನೀಡುವಿಕೆಯು ಯುವ ಸಮುದಾಯವನ್ನು ಸಮಾಜದಲ್ಲಿ ಸನ್ಮಾರ್ಗಕ್ಕೆ ಕೊಂಡೊಯ್ಯಲು, ಮಾರ್ಗದರ್ಶನ ಪರಿಣಾಮಕಾರಿಯಾಗುತ್ತದೆ. ಪ್ರತಿ ಮಗುವಿನ ಅಭಿರುಚಿಯ ವಿಶ್ಲೇಷಣಾತ್ಮ ವರದಿ ನೀಡುವ ವ್ಯವಸ್ಥೆ ನಮ್ಮಲ್ಲಿದೆಯೇ? ಈ ವ್ಯವಸ್ಥೆ ಇದ್ದಾಗ ಮಾತ್ರ ಹಲವಾರು ಯುವ ಜೀವಗಳಿಗೆ ಉಜ್ವಲ ಅವಕಾಶಗಳ ಬಾಗಿಲು ತೆರೆಯಲು ಸಾಧ್ಯ. ಇಂತಹ ಯುವ ಮಾನವ ಸಂಪನ್ಮೂಲಗಳ ನಕಾಶೆಯಿಂದ ಸರಕಾರಗಳು ಮತ್ತು ಉದ್ಯಮ ವಲಯದಲ್ಲಿ ದೀರ್ಘಕಾಲೀನ ಪ್ರಯೋಜನಗಳನ್ನು ಪಡೆಯಬಹುದಾಗಿದೆ ಎಂದು ಹೇಳತ್ತಾ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವು ಪ್ರತಿ ವ್ಯಕ್ತಿಯ ಅನನ್ಯ ಸಾಮರ್ಥ್ಯವನ್ನು ತೆರೆಯಲಿದೆ. ಸಮಾಜಕ್ಕೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು ಪ್ರತಿ ವ್ಯಕ್ತಿಯನ್ನು ಸಬಲೀಕರಿಸುತ್ತದೆ. ಈ 2 ದಿನದ ವಿಚಾರ ಸಂರ್ಕಿಣ್ರದಲ್ಲಿ ವಿಚಾರಗಳನ್ನು ವಿನಿಮಯ ಮಾಡಿಕೊಳ್ಳೋಣ. ಪರಿಕಲ್ಪನೆಗಳನ್ನು ಹಂಚಿಕೊಂಡು, ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಸಾಮಾಜಿಕ ಜಾಲತಾಣಗಳು ಮತ್ತು ಸಮಾಜದಲ್ಲಿ ಅಳವಡಿಸಿಕೊಳ್ಳಲು ಸಾಮಾನ್ಯ ಸನ್ನದ್ದು (ಅಭ್ಯಾಸ ಕ್ರಮ) ಕುರಿತು ಚರ್ಚಿಸೋಣ ಎಂದು ಹೇಳುತ್ತಾ ಈ ಕಾರ್ಯಕ್ರಮದಲ್ಲಿ ಒಟ್ಟಾಗಿ ಪಾಲ್ಗೊಡಿರುವ ಎಲ್ಲರಿಗೂ ಶುಭ ಹಾರೈಸುತ್ತ ನೀಡಲು

ಮುಂದಿನ ಎರಡು ದಿನಗಳ ಕಾಲ ನಡೆಯುವ ಚರ್ಚೆ ಮತ್ತು ವಿಚಾರ ಮಂಥನಗಳು ಉತ್ತಮ ಸಮಾಜದ ನಿರ್ಮಾಣಕ್ಕೆ ಕ್ರಿಯಾ ಮಾರ್ಗಸೂಚಿಯಾಗಲಿ ಎಂಬ ಆಶಾವಾದದೊಂದಿಗೆ ಈ ಕ್ರಿಯಾ ಮಾರ್ಗಸೂಚಿಯು ಸಮಾಜದ ಜನರ ಜೀವನ ಮತ್ತು ಜೀವನೋಪಾಯಗಳನ್ನು ಪರಿವರ್ತಿಸಲು ಸಹಾಯಕವಾಗಲಿ ಎಂದು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ ನಮೋಶಿ ಮಾತನಾಡಿ ಕೃತಕ ಬುದ್ಧಿಮತ್ತೆ ಹಾಗೂ ಸಾಮಾಜಿಕ ಜಾಲತಾಣಗಳು ಮಾನವನ ಅವಿಭಾಜ್ಯ ಅಂಗವಾಗಿದೆ ಎಂದು ಹೇಳಿದರು 

ಇದೆ ಸಂದರ್ಭದಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣದ 107 ಸಂಶೋಧನಾ ಲೇಖನಗಳ 2 ಸಂಪುಟದಲ್ಲಿ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಹಾಗೂ ಕಾಲೇಜಿನ ಸಂಚಾಲಕರಾದ ನಾಗಣ್ಣ ಘಂಟಿ, ಅರುಣಕುಮಾರ ಎಂ ವಾಯ್ ಪಾಟೀಲ, ಅನಿಲಕುಮಾರ ಮರಗೊಳ ಡಾ ಮಹಾದೇವಪ್ಪ ರಾಂಪೂರೆ, ಡಾ ಶರಣಬಸಪ್ಪ ಹರವಾಳ ,ಡಾ ಅನಿಲಕುಮಾರ ಪಟ್ಟಣ, ಸಾಯಿನಾಥ ಪಾಟೀಲ್, ಉಪಪ್ರಾಚರಾದ ಡಾ ವೀಣಾ ಎಚ್ ವೇದಿಕೆಯ ಮೇಲೆ ಉಪಸ್ಥಿತರಿದ್ದರು ರಾಷ್ಟ್ರೀಯ ವಿಚಾರ ಸಂಕಿರಣ ಸಂಘಟನಾ ಕಾರ್ಯದರ್ಶಿ ಹಾಗೂ ಸಮಾಜಶಾಸ್ತ್ರ ವಿಭಾಗದ ಡಾ ಮಹೇಶ್ ಕುಮಾರ್ ಗಂವ್ಹಾರ ಪ್ರಾ‌ಸ್ತವಿಕವಾಗಿ ಮಾತನಾಡಿದರು, ಪ್ರಾಚಾರ್ಯ ಡಾ ರಾಜೇಂದ್ರ ಕೊಂಡಾ ಸ್ವಾಗತಿಸಿದರು ಡಾ ಉಮಾ ರೇವೂರ, ಡಾ ಪ್ರೇಮಚಂದ್ ಚವ್ಹಾಣ ನಿರೂಪಿಸಿದರು, ಡಾ ರೇಣುಕಾ ಎಚ್ ಡಾ ಮುಖಿಮಿಯಾ ಹಾಗೂ ಸಂಗೀತ ವಿಭಾಗದ ವಿದ್ಯಾರ್ಥಿಗಳು ಪ್ರಾರ್ಥಿಸಿದರು.