ನಕಲಿ ವೈದ್ಯರ ಹಾವಳಿ ತಡೆಗೆ ಕರವೇ ಪ್ರತಿಭಟನೆ

ನಕಲಿ ವೈದ್ಯರ ಹಾವಳಿ ತಡೆಗೆ ಕರವೇ ಪ್ರತಿಭಟನೆ

ನಕಲಿ ವೈದ್ಯರ ಹಾವಳಿ ತಡೆಗೆ ಕರವೇ ಪ್ರತಿಭಟನೆ

ಶಹಾಬಾದ: ನಕಲಿ ವೈದ್ಯರ ಹಾವಳಿ ತಡೆಗಟ್ಟುವಂತೆ ಆಗ್ರಹಿಸಿ ಕರವೇ ವತಿಯಿಂದ ಪ್ರತಿಭಟನೆ ನಡೆಸಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಶಹಾಬಾದ: ತಾಲೂಕಿನಲ್ಲಿ ಮಿತಿಮೀರಿ ಇರುವ ನಕಲಿ ವೈದ್ಯರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ನಗರದ ಸಮುದಾಯ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ(ನಾರಾಯಣ ಗೌಡ) ಅಧ್ಯಕ್ಷರಾದ ಯಲ್ಲಾಲಿಂಗ ಹೈಯ್ಸಳಕರ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.

ಸಂಘಟನೆಯ ತಾಲೂಕಾಧ್ಯಕ್ಷ ಯಲ್ಲಾಲಿಂಗಹೈಯ್ಯಾಳಕರ್ ಮಾತನಾಡಿ, ಪಟ್ಟಣದಲ್ಲಿ ಕೆಲವು ನಕಲಿ ವೈದ್ಯರು ಮತ್ತು

ಕಳಪೆ ಗುಣಮಟ್ಟದ ಔಷಗಳ ಮಾರಾಟದ ಹಾವಳಿ ದಿನೇದಿನೆ ಹೆಚ್ಚುತ್ತಿದ್ದು ಇದರಿಂದ ಗ್ರಾಮೀಣ ಪ್ರದೇಶದ ಮುಗ್ಧ ಜನತೆ ಮೋಸ ಹೋಗುತ್ತಿದ್ದಾರೆ.

ನಕಲಿ ಕ್ಲಿನಿಕ್ ಮತ್ತು ವೈದ್ಯರ ಹಾವಳಿ ಹೆಚ್ಚಾಗಿದ್ದು, ಇದರಿಂದ ಗ್ರಾಮೀಣ ಭಾಗದ ಜನಸಾಮಾನ್ಯರ ಆರೋಗ್ಯದ ಜತೆ ನಕಲಿ ವೈದ್ಯರು ಚೆಲ್ಲಾಟವಾಡುತ್ತಿದ್ದು, ಇಂತಹ ವೈದ್ಯರ ವಿರುದ್ಧ ಕ್ರಮ ಕೈಗೊಂಡು ಜನಸಾಮಾನ್ಯರಿಗೆ ಮಾಡಿಕೊಡಬೇಕು. ಅನುಕೂಲ ಇಲ್ಲವಾದಲ್ಲಿ ಮುಂದಿನ ದಿನಮಾನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಚ್ಚರಿಕೆ ನೀಡಿದರು.

ತಾಲೂಕು ಯುವ ಘಟಕದ ಅಧ್ಯಕ್ಷ ಶಿವಕುಮಾರ ದೊರೆ, ತಾಲೂಕು ಪ್ರಧಾನ ಕಾರ್ಯದರ್ಶಿ ಮಹೇಶ ಹಲಕಟ್ಟಿ ತಾಲೂಕು ಉಪಾಧ್ಯಕ್ಷ ಮಹೇಶ ಕಾಂಬ್ಳೆ ನಗರಾಧ್ಯಕ್ಷ ಪ್ರಸಾದಕುಮಾರ ಮಠಪತಿ, ಭೀಮು, ಗ್ರಾಮ ಘಟಕ ಅಧ್ಯಕ್ಷ ಮಂಜುನಾಥ ಡೊಣಗಾವ್, ಮೋಹನ, ಸಂಜು ಬಿರಾಳಕಾರ, ಅನಿಲಕುಮಾರ, ಅನೀಲ ದೋತ್ರೆ, ಸೋಯಲ್ ಖಾನ್, ಶಶಿಕುಮಾರ ಪೂಜಾರಿ, ಮತೀನ್, ಕೆ.ಜಿ.ಪಾಟೀಲ ಇತರರು ಈ ಸಂದರ್ಭದಲ್ಲಿದ್ದರು.

ಶಹಾಬಾದ್ ಸುದ್ದಿ ನಾಗರಾಜ್ ದಂಡಾವತಿ