ನೌಕರ ಸಂಘದ ಕಚೇರಿಯಲ್ಲಿ ಪದಾಧಿಕಾರಿಗಳಿಗೆ ಸನ್ಮಾನ

ನೌಕರ ಸಂಘದ ಕಚೇರಿಯಲ್ಲಿ ಪದಾಧಿಕಾರಿಗಳಿಗೆ ಸನ್ಮಾನ
ಕಲಬುರಗಿ : ಕರ್ನಾಟಕ ಸರ್ಕಾರ ನೌಕರ ಸಂಘದ ಕಚೇರಿಯಲ್ಲಿ ನೂತನ ಕರ್ನಾಟಕ ಸರ್ಕಾರ ನೌಕರ ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷರಾಗಿ ಲೋಕಪಯೋಗಿ ಇಲಾಖೆಯ ಅಧೀಕ್ಷಕ ಇಂಜಿನಿಯರ್ ಡಾ. ಸುರೇಶ್ ಎಲ್ ಶರ್ಮಾ, ಕಾರ್ಯಧ್ಯಕ್ಷರಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಚಂದ್ರಕಾಂತ ಏರಿ ಇವರನ್ನು ಆಯ್ಕೆ ಮಾಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಬಸವರಾಜ ಬಳುಂಡಗಿ, ಜಿಲ್ಲಾ ಖಜಾಂಚಿ ಶ್ರೀಮಂತ ಪಟ್ಟೇದಾರ, ರಾಜ್ಯ ಪರಿಷತ್ ಸದಸ್ಯ ಧರ್ಮರಾಜ ಜವಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ ಹೂಗಾರ ಸೇರಿದಂತೆ ಇತರರು ಇದ್ದರು.