ಸ್ಲಂ ಜನರ ಸಾಮಾಜಿಕ ಮತ್ತು ಅಭಿವೃದ್ಧಿ ತಾರತಮ್ಯ ವಿರೋಧಿಸಿ ಫೆಬ್ರವರಿ 24ರಂದು ಬೆಂಗಳೂರು ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ

ಸ್ಲಂ ಜನರ ಸಾಮಾಜಿಕ ಮತ್ತು ಅಭಿವೃದ್ಧಿ ತಾರತಮ್ಯ ವಿರೋಧಿಸಿ ಫೆಬ್ರವರಿ 24ರಂದು ಬೆಂಗಳೂರು ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ
ಕಲಬುರಗಿ: ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಸಾವಿತ್ರಿಬಾಯಿಪುಲೆ ಮಹಿಳಾ ಸಂಘಟನೆಯಿAದ ಫೆಬ್ರವರಿ 24 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಸ್ಲಂ ಜನರ ಮೇಲಿನ ಸಾಮಾಜಿಕ ಮತ್ತು ಅಭಿವೃದ್ಧಿ ತಾರತಮ್ಯ ವಿರೋಧಿಸಿ ಹಾಗೂ ಖಾಸಗೀ ಮಾಲೀಕತ್ವದ ಕೊಳಚೆ ಪ್ರದೇಶಗಳ ಘೋಷಣೆಗೆ ತೊಡಕಾಗಿರುವ ಸಂವಿಧಾನ ವಿರೋಧಿ ವಸತಿ ಇಲಾಖೆ ಸುತ್ತೋಲೆಯನ್ನು ತಕ್ಷಣ ಹಿಂಪಡೆಯಲು ಆಗ್ರಹಿಸಿ 2025-26ನೇ ಸಾಲಿನ ಬಜೆಟ್ನಲ್ಲಿ ಸ್ಲಂ ಜನರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ನಲ್ಲಿ ಪಾಲು. 2023ರ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷ ನೀಡಿರುವ ಪ್ರಣಾಳಿಕೆ ಭರವಸೆಗಳನ್ನು ಈಡೇರಿಸಲು ಒತ್ತಾಯಿಸಿ ಹಾಗೂ ಸ್ಲಂ ಜನರಿಗೆ ಪ್ರತ್ಯೇಕ ಸಚಿವಾಲಯ ಮತ್ತು ನಗರ ಉದ್ಯೋಗ ಖಾತ್ರಿ ಯೋಜನೆ ಘೋಷಣೆ ಸೇರಿದಂತೆ ನಿವೇಶನ ರಹಿತರಿಗೆ ವಸತಿ ಕಲ್ಪಿಸುವ ಲ್ಯಾಂಡ್ ಬ್ಯಾಂಕ್ ಯೋಜನೆಯನ್ನು ಜಾರಿಗೊಳಿಸುವುದು ಸೇರಿದಂತೆ ವಿವಿಧ ಹಕ್ಕೋತ್ತಾಯಗಳ ಈಡೇರಿಕೆಗೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸ್ಲಂ ಜನಾಂದೋಲನ ಸಂಚಾಲಕಿ ರೇಣುಕಾ ಸರಡಗಿ ತಿಳಿಸಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ 5 ಸಾವಿರ ಕಾರ್ಯಕರ್ತರು ಫ್ರೀಡಂ ಪಾರ್ಕ್ನಲ್ಲಿ ಸಮಾವೇಶಗೊಂಡು ನಮ್ಮ ಹಕ್ಕೋತ್ತಾಯಗಳನ್ನು ವಸತಿ ಸಚಿವರ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಗುತ್ತಿದೆ. ಕರ್ನಾಟಕ ರಾಜ್ಯದ ನಗರ ಜನಸಂಖ್ಯೆಯಲ್ಲಿ ಶೇ.40% ರಷ್ಟು ಸ್ಲಂ ನಿವಾಸಿಗಳಾಗಿ ಪರಿಶಿಷ್ಟ ಜಾತಿ/ಪಂಗಡ ಹಿಂದುಳಿದ, ಅಲ್ಪಸಂಖ್ಯಾತ ಮತ್ತು ಅಲೆಮಾರಿ ಸಮುದಾಯಗಳನ್ನೊಳಗೊಂಡ ನಗರವಂಚಿತ ಸಮುದಾಯಗಳು ಸಾಮಾಜಿಕ ಅಸಮಾನತೆಯ ಭಾಗವಾಗಿ ಬದುಕು ಕಟ್ಟಿಕೊಡುತ್ತಿದ್ದು ಕೊಳಗೇರಿಗಳಲ್ಲಿರುವ ಜನರನ್ನು ನಾಗರೀಕರನ್ನಾಗಿ ಇಂದಿನ ಅಭಿವೃದ್ಧಿ ಗುರುತಿಸದೇ ತಾರತಮ್ಯವೆಸಗಲಾಗುತ್ತಿದೆ. ಅಂದರೆ ಭೂಮಿ ವಸತಿ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು,ರಸ್ತೆ, ಚರಂಡಿ ಬೀದಿ ದೀಪ ಶೌಚಾಲಯ ಜೀವನೋಪಾಯದಂತಹ ಕನಿಷ್ಠ ಸೌಲಭ್ಯಗಳನ್ನು ನೀಡದೆ ಅಭಿವೃದ್ಧಿಯಿಂದ ನಮ್ಮನ್ನು ದೂರ ಇಡುವ ಮೂಲಕ ಸಂವಿಧಾನದ ಖಾತ್ರಿಗಳನ್ನು ದೊರಕದಂತೆ ಮಾಡಲಾಗಿದೆ. ಹಾಗಾಗಿ ಸಂವಿಧಾನದ ಸಾಮಾಜಿಕ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಹಿನ್ನೆಲೆಯಲ್ಲಿ ಕೆಲಸ ಮಾಡುತ್ತಿರುವ ಕರ್ನಾಟಕ ಸರ್ಕಾರ ನಮ್ಮ ಪರವಾದ ನಿಲುವಿಗೆ ಆಗ್ರಹಿಸಿ ಈ ಪ್ರತಿಭಟನೆ ನಡೆಸಲಾಗುತ್ತಿದೆ. ಬೇಡಿಕೆಗಳಾದ 2025-25ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಸ್ಲಂ ನಿವಾಸಿಗಳ ಜನಸಂಖ್ಯೆಗೆ ಅನುಗುಣವಾಗಿ ಕೊಳಚೆ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ 5 ಸಾವಿರ ಕೋಟಿ ಹಣ ಮೀಸಲಿಡಬೇಕು, ಖಾಸಗೀ ಸ್ಲಂಗಳ ಘೋಷಣೆಗೆ ತೊಡಕಾಗಿರುವ ವಸತಿ ಇಲಾಖೆ ಸುತ್ತೋಲೆಯನ್ನು ಹಿಂಪಡೆದು ಭೂಸ್ವಾಧೀನಕ್ಕೆ ಸರ್ಕಾರ ಹಣ ನೀಡಬೇಕು, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ 50ನೇ ವರ್ಷದ ಸುವರ್ಣ ಸಂಭ್ರಮದ ನೆನಪಿಗಾಗಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಕಾಯಿದೆಯನ್ನು ತಿದ್ದುಪಡಿ ಮಾಡಬೇಕು, ಸ್ಲಂ ನಿವಾಸಿಗಳ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಪ್ರತ್ಯೇಕ ಸಚಿವಾಲಯವನ್ನು ಘೋಷಿಸಬೇಕು, ನಗರಗಳಲ್ಲಿ ಸಾಮಾಜಿಕ ಅಸಮಾನತೆಯ ಭಾಗವಾಗಿರುವ ಸ್ಲಂ ಜನರ ಆರ್ಥಿಕ ಅಭಿವೃದ್ಧಿ ಮತ್ತು ಜೀವನೋಪಾಯಕ್ಕಾಗಿ ನಗರ ಉದ್ಯೋಗ ಖಾತ್ರಿ ಯೋಜನೆಯನ್ನು ಜಾರಿಗೊಳಿಸಬೇಕು, ನಿವೇಶನ ರಹಿತರಿಗೆ ಚಿತ್ರದುರ್ಗ ಘೋಷಣೆಯಂತೆ ವಸತಿ ಕಲ್ಪಿಸಲು 2017-18ರ ಬಜೆಟ್ ಘೋಷಣೆಯಂತೆ ನಗರ ಲ್ಯಾಂಡ್ ಬ್ಯಾಂಕ್ ಯೋಜನೆಯನ್ನು ಜಾರಿಗೊಳಿಸಬೇಕು, ಪ್ರಧಾನಮಂತ್ರಿ ಆವಾಸ್ ಯೋಜನೆ ಫಲಾನುಭವಿ ಶುಲ್ಕವನ್ನು ಎಸ್ಸಿ/ಎಸ್ಟಿಗಳಿಗೆ ಉಚಿತ ಇತರೆ ಸಮುದಾಯಗಳಿಗೆ 25 ಸಾವಿರ ಪಾವತಿಸಲು ಅವಕಾಶ ಕಲ್ಪಿಸಬೇಕು, ಬೆಂಗಳೂರು ಸ್ಲಂ ನಿವಾಸಿಗಳ ಪುನರ್ವಸತಿಗಾಗಿ ಭೂ ಮಂಜೂರಾತಿ ನೀಡಬೇಕು ಹಾಗೂ ನೆಲಬಾಡಿಗೆ ಸ್ಲಂಗಳಿಗೆ ನೀತಿಯನ್ನು ರೂಪಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.