ಕರುನಾಡು ಕಂಡ ಶ್ರೇಷ್ಠ ಸಾಹಿತಿ ಡಾ.ಪುರುಷೋತ್ತಮ ಬಿಳಿಮಲೆ: ಸಂಗಮೇಶ ಎನ್ ಜವಾದಿ.

ಕರುನಾಡು ಕಂಡ ಶ್ರೇಷ್ಠ ಸಾಹಿತಿ ಡಾ.ಪುರುಷೋತ್ತಮ ಬಿಳಿಮಲೆ: ಸಂಗಮೇಶ ಎನ್ ಜವಾದಿ.

ಕರುನಾಡು ಕಂಡ ಶ್ರೇಷ್ಠ ಸಾಹಿತಿ ಡಾ.ಪುರುಷೋತ್ತಮ ಬಿಳಿಮಲೆ: ಸಂಗಮೇಶ ಎನ್ ಜವಾದಿ.

ಕರುನಾಡು ಕಂಡ ಶ್ರೇಷ್ಠ ಸಾಹಿತಿ , ಪ್ರಗತಿಪರ ವಿಚಾರಧಾರೆಯ ಶ್ರೇಷ್ಠ ವಿದ್ವಾಂಸರು, ನೇರ ನುಡಿಯ ಚಿಂತಕರು, ಹೋರಾಟಗಾರರು, ತಮ್ಮದೇ ಆದ ವಿಶಿಷ್ಟ ರೀತಿಯಲ್ಲಿ ನಾಡಿನ ಸೇವೆಗೈಯುತ್ತಿರುವವರು ಡಾ.ಪುರುಷೋತ್ತಮ ಬಿಳಿಮಲೆ ಸರ್ ರವರು ಎಂದು ಪ್ರಗತಿಪರ ಚಿಂತಕರಾದ ಸಂಗಮೇಶ ಎನ್ ಜವಾದಿ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅನೇಕ ಜವಾಬ್ದಾರಿಗಳು ಈ ಹಿಂದೆ ಹೊತ್ತುಕೊಂಡು ಕೆಲಸ ಮಾಡಿರುವ ಅನುಭವ ಡಾ.ಪುರುಷೋತ್ತಮ ಬಿಳಿಮಲೆ ಸರ್ ರವರು ಹೊಂದಿದ್ದಾರೆ.

ಡಾ.ಪುರುಷೋತ್ತಮ ಬಿಳಿಮಲೆ ಅವರು ಜನಿಸಿದ್ದು 1955 ಆಗಸ್ಟ್‌ 21ರಂದು. ನವದೆಹಲಿಯ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಕನ್ನಡ ಪ್ರಾಧ್ಯಾಪಕರಾಗಿರುವ ಡಾ.ಪುರುಷೋತ್ತಮ ಬಿಳಿಮಲೆಯವರು ಬಂಡಾಯ-ದಲಿತ ಸಾಹಿತ್ಯ ಚಳುವಳಿಯಲ್ಲಿ ನೇರವಾಗಿ ಭಾಗವಹಿಸಿದವರು, ಜನಪರ ಹೋರಾಟಗಳನ್ನು ಸಂಘಟಿಸಿದವರು. ಬಡವರ, ಹಿಂದುಳಿದವರ , ಅಲ್ಪಸಂಖ್ಯಾತರ ಮತ್ತು ದಲಿತರ ಪರವಾಗಿ ನಿರಂತರವಾಗಿ ಬರೆಯುತ್ತಲೇ ಬಂದಿರುವ ಅವರು ಸಾಹಿತ್ಯವನ್ನು ತಮ್ಮ ಹೋರಾಟಗಳಿಗೆ ಪೂರಕವಾಗಿ ಬಳಸಿಕೊಂಡಿದ್ದಾರೆ.

ಜನಪದ ಸಾಹಿತ್ಯವನ್ನು ಗಂಭೀರವಾಗಿ ಅಭ್ಯಸಿಸಿರುವ ಅವರು ಆ ಮೂಲಕ ಶಿಷ್ಟ ಸಾಹಿತ್ಯದ ಕೆಲವು ಜನವಿರೋಧಿ ನೆಲೆಗಳನ್ನು ಗಂಭೀರವಾಗಿ ಪ್ರಶ್ನಿಸಿದ್ದಾರೆ. 1955ರಲ್ಲಿ ಸುಳ್ಯ ತಾಲೂಕಿನ ಪಂಜದಲ್ಲಿ ಹುಟ್ಟಿದ ಇವರು ಪುತ್ತೂರು, ಮದರಾಸು, ಮಂಗಳೂರುಗಳಲ್ಲಿ ಶಿಕ್ಷಣ ಪಡೆದು ಸುಳ್ಯ, ಮಂಗಳೂರು, ಹಂಪಿ, ದೆಹಲಿಗಳಲ್ಲಿ ಕೆಲಸ ನಿರ್ವಹಿಸಿದ್ದಾರೆ. ದಲಿತ ಜಗತ್ತು, ಶಿಷ್ಟ ಪರಿಶಿಷ್ಟ, ಕರಾವಳಿ ಜಾನಪದ, ಕೂಡುಕಟ್ಟು, ಬಹುರೂಪ ಇವರ ಕೆಲವು ಮುಖ್ಯ ಕೃತಿಗಳು. ಕರ್ನಾಟಕ ಜಾನಪದ ಅಕಾಡೆಮಿ ಮತ್ತು ರಾಜ್ಯೋತ್ಸವ ಪ್ರಶಸ್ತಿಗಳು ಸೇರಿ ಹಲವು ಗೌರವಗಳಿಗೆ ಪಾತ್ರರಾಗಿದ್ದಾರೆ.

ಇನ್ನು ಕನ್ನಡ ನಾಡು ನುಡಿ ನೆಲ ಜಲ ಭಾಷೆ ಸಂಸ್ಕೃತಿಯ ಸಂರಕ್ಷಣೆಗಾಗಿ ಟೊಂಕಕಟ್ಟಿಕೊಂಡು ಹಗಲಿರುಳೆನ್ನದೆ ದುಡಿಯುತ್ತಿದ್ದಾರೆ.

ಸಧ್ಯ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನಾಡಿನಾದ್ಯಂತ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕನ್ನಡ ಸಾಹಿತ್ಯ, ಸಂಸ್ಕೃತಿ ಉಳಿಸಿ ಬೆಳೆಸುವ ಕಾರ್ಯ ಸದ್ದುಗದ್ದಲವಿಲ್ಲದೆ ಮಾಡುತ್ತಿದ್ದಾರೆ ಎಂದು ಹೇಳಿದರು.

ಬಿಳಿಮಲೆ ಸರ್ ರವರ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಇಂದಿನ ರಾಜ್ಯ ಸರ್ಕಾರವು ಶ್ರೀಯುತರನ್ನು ಕನ್ನಡ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಮಾಡಿರುತ್ತಾರೆ. ಸಂತೋಷ ಪಡುವ ಸಂಗತಿಯಾಗಿದೆ.

ಅಂದಹಾಗೆ ಬಿಳಿಮಲೆ ಸರ್ ರವರ ಪ್ರಾಮಾಣಿಕ ಸೇವೆ ಮಾಡುತ್ತಿರುವುದು ನಾಡಿಗೆ ಗೊತ್ತಿರುವ ಸಂಗತಿಯೇ ಆಗಿದೆ.

ಕಾಂಗ್ರೆಸ್ ಪಕ್ಷ ಇಂತಹ ನಿಸ್ವಾರ್ಥ ಮನೋಭಾವ ಹೊಂದಿರುವ ಶ್ರೇಷ್ಠ ಸಾಹಿತಿಗಳನ್ನು ಗುರುತಿಸುವುದು ಸಹ ಅದರ ಪರಮ ಕರ್ತವ್ಯ ವೆಂದು ನಾವು ಭಾವಿಸಿದ್ದೇವೆ. ಅದಕ್ಕಾಗಿಯೇ 

ಇವರ ನಿಸ್ವಾರ್ಥ ಸೇವೆ ಹಾಗೂ ಜನಪರ ಕಾಳಜಿ ಸೇವೆಯನ್ನು ನಾಡಿನ ಉದ್ದಗಲಕ್ಕೂ ತಲುಪಬೇಕಾಗಿದೆ.

ಕಾರಣ ಖಾಲಿ ಇರುವ ನಾಲ್ಕು ವಿಧಾನ ಪರಿಷತ್ (ಎಂಎಲ್‌ಸಿ )ಸ್ಥಾನಗಳಿಗೆ ಶೀಘ್ರದಲ್ಲೇ ನೇಮಕಾತಿ ನಡೆಯಲಿದೆ. ಇದರಲ್ಲಿ ಒಂದು ಸ್ಥಾನಕ್ಕೆ ಡಾ. ಪುರುಷೋತ್ತಮ ಬಿಳಿಮಲೆ ರವರ ನಿಸ್ವಾರ್ಥ ಸೇವೆ ಹಾಗೂ ಸಾಹಿತ್ಯ ಸೇವೆ ಪರಿಗಣಿಸಿ, ವಿಧಾನ ಪರಿಷತ್ತಿಗೆ ನೇಮಕಾತಿ ಮಾಡಬೇಕು. 

ಮಾಡುವ ಮುಖಾಂತರ ಸಾವಿರಾರು ಸಾಹಿತ್ಯ ಅಭಿಮಾನಿಗಳಿಗೆ ಗೌರವ ನೀಡಿದಂತಾಗುತ್ತದೆ ಎಂದು ತಿಳಿಸಿದರು.

ಈ ನಿಟ್ಟಿನಲ್ಲಿ ಶ್ರೀಯುತರನ್ನು ಪರಿಗಣಿಸಲು ಈ ಮೂಲಕ ಮಾನ್ಯ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಮಲ್ಲಿಕಾರ್ಜುನ ಖರ್ಗೆ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ರವರಿಗೂ ಅದೇ ರೀತಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ರವರು, ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರು, ಉಪಮುಖ್ಯಮಂತ್ರಿ ಗಳಾದ ಡಿ ಕೆ ಶಿವಕುಮಾರ್ ರವರಿಗೂ ವಿನಂತಿಯ ಪೂರ್ವಕವಾಗಿ ಸಂಗಮೇಶ ಎನ್ ಜವಾದಿ ರವರು ಒತ್ತಾಯಿಸಿದ್ದಾರೆ.