ಬಾಲರಾಜ್ ಅಶೋಕ ಗುತ್ತೇದಾರ ನೇತೃತ್ವದಲ್ಲಿ ಪ್ರತಿಭಟನೆ

ಬಾಲರಾಜ್ ಅಶೋಕ ಗುತ್ತೇದಾರ ನೇತೃತ್ವದಲ್ಲಿ ಪ್ರತಿಭಟನೆ
ಕಲಬುರಗಿ: ಮಾಜಿ ಮುಖ್ಯ ಮಂತ್ರಿಗಳು,ಜಿ.ಡಿ.ಎಸ್ ಪಕ್ಷದ ರಾಜ್ಯಾಧ್ಯಕ್ಷರು, ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಹಾಗೂ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ರವರ ಆದೇಶದ ಮೇರೆಗೆ ಕಲಬುರಗಿ ಜಿಲ್ಲಾ ಅಧ್ಯಕ್ಷರಾದ ಬಾಲರಾಜ್ ಅಶೋಕ ಗುತ್ತೇದಾರ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸರಕಾರದ ವಿರುದ್ದ ಪ್ರತಿಭಟನೆ ನಡೆಸಯಿತು.
ಕಾಂಗ್ರೆಸ್ನ 5 (ಐದು) ಗ್ಯಾರಂಟಿ ಯೋಜನೆಗಳನ್ನು ಸರಿಯಾಗಿ ಜನರಿಗೆ ತಲುಪುತ್ತಿಲ್ಲದ್ದರಿಂದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತ ದಿಂದ ಜಿಲ್ಲಾಧಿಕಾರಿಗಳ ಕಛೇರಿ ವರೆಗೆ ಪ್ರತೀಭಟನೆ ಮುಖಾಂತರ ತೆರಳಿ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ರಾಜ್ಯ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ, ಅಧಿಕಾರ ದುರ್ಬಳಕೆ, ಜನ ವಿರೋಧಿನೀತಿ, ಅಗತ್ಯ ವಸ್ತುಗಳ ಬೆಲೆ ಏರಿಕೆ, 5(ಐದು) ಗ್ಯಾರಂಟಿ ಯೋಜನೆಗಳನ್ನು ಸರಿಯಾಗಿ ಜನರಿಗೆ ತಲುಪುತ್ತಿಲ್ಲದ್ದರಿಂದ ಜೆಡಿಎಸ್ ಪಕ್ಷದ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯಧ್ಯಕ್ಷರು, ಮಾಜಿ ಶಾಸಕ ದೊಡ್ಡಪ್ಪ ಗೌಡ ಪಾಟೀಲ್ ನರಿಬೋಳ್, ಮಹಾಪ್ರಧಾನ ಕಾರ್ಯದರ್ಶಿ ಬಸವರಾಜ್ ಬೀರಬಿಟ್ಟೆ, ಕಾರ್ಯಧ್ಯಕ್ಷರುಗಳಾದ ಶಾಮರಾವ್ ಸುರನ್, ರಾಮಚಂದ್ರ ಅಟ್ಟೂರ್, ಯುವ ಅಧ್ಯಕ್ಷ ಪ್ರವೀಣ್ ಜಾಧವ, ಕೃಷ್ಣ ರೆಡ್ಡಿ, ಹಿರಿಯ ಮುಖಂಡರಾದ ಮಲ್ಲಿಕಾರ್ಜುನ ಸಂಗಣಿ, , ಸುನಿಲ್ ಗಜರೆ, ಸಿದ್ರಾಮಪ್ಪ ಹೋದಲೂರ್, ಬೈಲಪ್ಪ ಪತ್ತೇದಾರ ಮಂಜುಗೌಡ ಪಾಟೀಲ್, ವಿಠ್ಠಲ್ ಜಾಧವ, ದೇವಿಂದ್ರಾ ಹಸನಪುರ ನಾಮದೇವ್ ಕಾಂಬಳೆ, ಶಿವರಾಮ್ ರೆಡ್ಡಿ, ಜಗನ್ನಾಥ ರೆಡ್ಡಿ, ಹಣಮಂತ ಕಂದಳ್ಳಿ, ರಾಘವೇಂದ್ರ ಗುತ್ತೇದಾರ, ಯೇಸುನಾಥ್, ಮಹಿಳಾ ಮುಖಂಡರಾದ ಮಹೇಶ್ವರಿ ವಾಲೆ, ಮಹನಂದ ಪಡಶೆಟ್ಟಿ, ಸುನೀತಾ ಕೋರವಾರ, ಅನುರಾಧ ಹಾಸನ, ಸುನೀತಾ ತಳವಾರ, ಗೀತಾ ಸೇಡಂ, ಅನ್ನಪೂರ್ಣ ಕುಲಕರ್ಣಿ ಸೇರಿದಂತೆ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ರೈತರು ಉಪಸ್ಥಿತರಿದ್ದರು.