ಸೂಕ್ತ ತಯಾರಿಯಿಂದ ಪರೀಕ್ಷೆ ಸುಲಭವಾಗುತ್ತದೆ: ಡಾ. ಪ್ರಹ್ಲಾದ ಬುರ್ಲಿ.

ಸೂಕ್ತ ತಯಾರಿಯಿಂದ ಪರೀಕ್ಷೆ ಸುಲಭವಾಗುತ್ತದೆ: ಡಾ. ಪ್ರಹ್ಲಾದ ಬುರ್ಲಿ.
ಹತ್ತನೇ ತರಗತಿ ವಿದ್ಯಾರ್ಥಿಗಳ ಜೀವನದಲ್ಲಿ ಬಹಳ ಮಹತ್ವದ ಘಟ್ಟ. ಸೂಕ್ತ ತಯಾರಿಗಳನ್ನು ಮಾಡಿಕೊಂಡರೆ ಎಂತಹ ಪರೀಕ್ಷೆಗಳನ್ನು ಸುಲಭವಾಗಿ ಎದುರಿಸಬಹುದು ಎಂದು ಆರ್. ಜೆ. ಕಾಲೇಜಿನ ಪ್ರಾಚಾರ್ಯರಾದ ಡಾ. ಪ್ರಲ್ಹಾದ್ ಬುರ್ಲಿ ಅವರು ಹೇಳಿದರು. ಅವರು ರಾವೂರ ಗ್ರಾಮದ ಶ್ರೀ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಹತ್ತನೇ ತರಗತಿ ಮಕ್ಕಳ ಬೀಳ್ಕೊಡುಗೆ ಸಮಾರಂಭವನ್ನು ಉದ್ಘಾಟನೆ ಮಾಡಿ ಮಾತನಾಡಿದರು. ಪರೀಕ್ಷೆಗಳಂತ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮನಸ್ಸನ್ನು ಬೇರೆಡೆ ಸೆಳೆಯುವ ಅನೇಕ ಆಕರ್ಷಣೆಗಳು ಇದ್ದರೂ ಅದಾವುದನ್ನು ಲೆಕ್ಕಿಸದೇ ಓದಿನ ಕಡೆಗೆ ಮಾತ್ರ ನಮ್ಮ ಗಮನವನ್ನು ಕೇಂದ್ರೀಕರಿಸಿ ಅಧ್ಯಯನ ಮಾಡಿದ್ದೇ ಆದಲ್ಲಿ ಉತ್ತಮ ಫಲಿತಾಂಶ ಗಳಿಸಲು ಸಾಧ್ಯ. ನಿಮ್ಮ ಮೇಲೆ ಶಾಲೆ, ಪಾಲಕರ ನಿರೀಕ್ಷೆ ಗಳಿವೆ ಅವುಗಳನ್ನು ಅರ್ಥಮಾಡಿಕೊಳ್ಳಬೇಕು. ದೈಹಿಕ, ಮಾನಸಿಕ ಆರೋಗ್ಯದ ಕಡೆಗೆ ಗಮನಕೊಟ್ಟು ಓದಿ. ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಬಿಡಿಸಿ, ಮೊಬೈಲ್, ಟಿವಿ ಯಿಂದ ದೂರವಿರಿ ಎಂದು ಕಿವಿ ಮಾತು ಹೇಳಿದರು.
ಶಿಕ್ಷಕಿ ರಾಧಾ ರಾಠೋಡ ಮಾತನಾಡಿದರು. ಮಹೇಶ, ವೈಷ್ಣವಿ, ಚೈತನ್ಯ ಅನಿಸಿಕೆ ಹೇಳಿದರು.
ಹತ್ತನೇ ತರಗತಿಯ ಮಕ್ಕಳಿಗೆ ಪ್ಯಾಡು, ಪೆನ್ನು ವಿತರಿಸಲಾಯಿತು.
ಸಂಸ್ಥೆಯ ಅಧ್ಯಕ್ಷ ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳು ಸಾನಿದ್ಯ ವಹಿಸಿದ್ದರು. ವೇದಿಕೆ ಮೇಲೆ ಸಂಸ್ಥೆಯ ಉಪಾಧ್ಯಕ್ಷ ಚೆನ್ನಣ್ಣ ಬಾಳಿ, ಕಾರ್ಯದರ್ಶಿ ಡಾ. ಗುಂಡಣ್ಣ ಬಾಳಿ, ಸದಸ್ಯ ಸಿದ್ದಲಿಂಗೇಶ ಜ್ಯೋತಿ, ಪ್ರಾಚಾರ್ಯ ಕೆ. ಐ. ಬಡಿಗೇರ ಉಪಸ್ಥಿತರಿದ್ದರು.
ಮುಖ್ಯಗುರು ವಿದ್ಯಾಧರ ಖಂಡಳ ಸೇರಿದಂತೆ ಶಿಕ್ಷಕರು, ಮಕ್ಕಳು ಉಪಸ್ಥಿತರಿದ್ದರು.
ಶಿಕ್ಷಕ ಸಿದ್ದಲಿಂಗ ಬಾಳಿ ಪ್ರಾಸ್ಥಾವಿಕವಾಗಿ ಮಾತನಾಡಿದರು.
ವಿದ್ಯಾರ್ಥಿನಿ ಅಕ್ಷತಾ ನಿರೂಪಿಸಿದಳು, ಸ್ನೇಹ ವಂದಿಸಿದಳು