ನನ್ನ ಭಾರತಕ್ಕಾಗಿ ಯುವಕರು ಮತ್ತು ಡಿಜಿಟಲ್ ಸಾಕ್ಷರತೆಗಾಗಿ ಯುವಕರು" ರಾಷ್ಟ್ರೀಯ ಸೇವಾಯೋಜನೆಯ ವಾರ್ಷಿಕ ವಿಶೇಷ ಶಿಬಿರ (೨೦೨೪ - ೨೦೨೫

ನನ್ನ ಭಾರತಕ್ಕಾಗಿ ಯುವಕರು ಮತ್ತು ಡಿಜಿಟಲ್ ಸಾಕ್ಷರತೆಗಾಗಿ ಯುವಕರು" ರಾಷ್ಟ್ರೀಯ ಸೇವಾಯೋಜನೆಯ ವಾರ್ಷಿಕ ವಿಶೇಷ ಶಿಬಿರ (೨೦೨೪ - ೨೦೨೫

"ನನ್ನ ಭಾರತಕ್ಕಾಗಿ ಯುವಕರು ಮತ್ತು ಡಿಜಿಟಲ್ ಸಾಕ್ಷರತೆಗಾಗಿ ಯುವಕರು"

ರಾಷ್ಟ್ರೀಯ ಸೇವಾಯೋಜನೆಯ ವಾರ್ಷಿಕ ವಿಶೇಷ ಶಿಬಿರ (೨೦೨೪ - ೨೦೨೫)

ಕಲಬುರಗಿ: ನಗರದ ರಾಜಾಪುರನಲ್ಲಿರುವ ಸರ್ಕಾರಿ ಮಹಾವಿದ್ಯಾಲಯ (ಸಾಯತ್ತ)ದಲ್ಲಿ ಸರಕಾರಿ ಮಹಾವಿದ್ಯಾಲಯ (ಸಾಯತ್ತ) ಕಲಬುರಗಿ ಹಾಗೂ ಗುಲಬರ್ಗಾ ವಿಶ್ವವಿದ್ಯಾಲಯಕಲಬುರ್ಗಿ ಮತ್ತು ರಾಷ್ಟ್ರೀಯ ಸೇವಾಯೋಜನ ಕೋಶ ಇವರುಗಳ ಸಂಯುಕ್ತ ಆಶ್ರಯದಲ್ಲಿ ೨೦೨೪ - ೨೫ ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವ-ಆರ್ಥಿಕ ಘಟಕ ಹಾಗೂ ಗುಲಬರ್ಗಾ ವಿಶ್ವವಿದ್ಯಾಲಯದ ಎ ಮತ್ತು ಬಿ ಮತ್ತು ಪಿಜಿ ಘಟಕಗಳ ವಾರ್ಷಿಕ ವಿಶೇಷ ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿದ ಕಾಲೇಜಿನ ಪ್ರಾಂಶುಪಾಲರಾದ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಡಾ.ಸವಿತಾ ತಿವಾರಿ ಅವರು ಮಾತನಾಡಿ ಎನ್‌ಎಸ್‌ಎಸ್ ಸ್ವಯಂ ಸೇವಕರು ಸೇವೆಯ ಮಹತ್ವವನ್ನು ತಿಳಿದುಕೊಳ್ಳಬೇಕು. ಹಾಗೂ ಸೇವಾ ಮನೋಭಾವವನ್ನು ಬೆಳೆಸಿಕೊಂಡು ಮುಂದೆ ಬರಬೇಕು ಎಂದರು. 

ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ. ವಿಜಯಕುಮಾರ ಸಾಲಿಮನಿ ಮಾತನಾಡಿ ವಿದ್ಯಾರ್ಥಿಗಳು ಕಷ್ಟಪಟ್ಟು ಓದಿ ವಿದ್ಯಾವಂತರಾಗಿ ಉದ್ಯೋಗ ಪಡೆದುಕೊಂಡು ಯಶಸ್ಸು ಕಾಣಬೇಕು ಎಂದರು. ಅತಿಥಿಗಳಾದ ಡಾ. ದವಲಪ್ಪ ಬಿಹೆಚ್ ಅವರು ವಿದ್ಯಾರ್ಥಿಗಳು ಮತ್ತು ಎನ್‌ಎಸ್‌ಎಸ್ ಕುರಿತು ಮಾತನಾಡಿದರು.

ಈ ಕಾರ್ಯಕ್ರಮದ ವೇದಿಕೆಯ ಮೇಲೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ. ರಾಜಕುಮಾರ ಸಲಗರ, ಎನ್. ಎಸ್ .ಎಸ್ ಅಧಿಕಾರಿಗಳಾದ ಡಾ. ನಾಗಪ್ಪ ಗೋಗಿ, ಡಾ. ಶಿವಲಿಂಗಪ್ಪ ಪಾಟೀಲ, ಡಾ. ಬಸಂತ ಸಾಗರ, ಡಾ. ಬಲಭೀಮ ಸಾಂಗ್ಲಿ, ಡಾ. ರವಿ ಬೌದ್ದೆ ಅವರು ಉಪಸ್ಥಿತರದ್ದರು. ಈ ಕಾರ್ಯಕ್ರಮದಲ್ಲಿ ಡಾ. ಶಾಮಲಾ ಸ್ವಾಮಿ ಅವರು ಪ್ರಾರ್ಥಿಸಿ ಎನ್‌ಎಸ್‌ಎಸ್ ಗೀತೆ ಹಾಡಿದರು. ಡಾ. ಬಸಂತ ಸಾಗರ ಸ್ವಾಗತಿಸಿದರು. ಡಾ ನಾಗಪ್ಪ ಗೋಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ.ರವಿ ಬೌದ್ದೆ ವಂದಿಸಿದರು. ಡಾ.ಬಲಭೀಮ ಸಾಂಗ್ಲಿಯವರು ಎನ್‌ಎಸ್‌ಎಸ್ ಪ್ರತಿಜ್ಞಾವಿಧಿಯನ್ನು ಓದಿದರುಮತ್ತು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು. ಈ ಕಾರ್ಯಕ್ರಮದಲ್ಲಿ ಶಿಬಿರಾಧಿಕಾರಿಗಳಾದ ಡಾ. ಶ್ರೀಮಂತ ಹೋಳಕರ, ಡಾ. ರೇಖಾ ಅಣ್ಣಿಗೇರಿ, ಡಾ.ಸುರೇಶ ಮಾಳೆ ಗಾಂವ, ಪ್ರೊ.ಮೇರಿ ಮ್ಯಥೋಸ್ ಉಪಸ್ಥಿತರಿದ್ದರು .ಈ ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಬೋದಕ ಹಾಗೂ ಬೋಧಕೇತರ ಸಿಬ್ಬಂದಿಯವರು ಹಾಗೂ ಶಿಬಿರಾಧಿಕಾರಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.