ಗ್ರಾಮ ಪಂಚಾಯತಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಪ್ರಶಸ್ತಿ ಪ್ರಧಾನ

ಗ್ರಾಮ ಪಂಚಾಯತಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಪ್ರಶಸ್ತಿ ಪ್ರಧಾನ
ಕಲಬುರಗಿ: ತಾಲ್ಲೂಕು ಪಂಚಾಯತ ಆವರಣದಲ್ಲಿ "ರಾಷ್ಟ್ರೀಯ ಪಂಚಾಯತ ರಾಜ್ದಿನ" ಕಾರ್ಯಕ್ರಮವನ್ನು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಭಂವರ ಸಿಂಗ್ ಮೀನಾ ಅವರು ಉದ್ಘಾಟಿಸಿ ಮಾತನಾಡುತ್ತಾ ಸಂವಿಧಾನದ 73ನೇ ತಿದ್ದುಪಡಿಯ ನಂತರ ಪಂಚಾಯತ್ ರಾಜ್ ವ್ಯವಸ್ಥೆಗೆ ಸಾಂವಿಧಾನಿಕ ಸ್ಥಾನಮಾನ ನೀಡಲಾಯಿತು. ಈ ನಿಟ್ಟಿನಲ್ಲಿ ಮೂರು ಹಂತದ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಗ್ರಾಮ ಪಂಚಾಯತಿಗಳ ಪಾತ್ರ ಅತೀ ಮುಖ್ಯವಾಗಿದೆ. ಅದರಲ್ಲೂ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳ ಪಾತ್ರ ಮಹತ್ತರವಾದದ್ದು ಎಂದು ಹೇಳಿದರು.
ಈ ಸಂದರ್ಭದಲ್ಲಿ 2024-25 ನೇ ಸಾಲಿನಲ್ಲಿ ಉತ್ತಮ ಸಾಧನೆ ಮಾಡಿದ ಗ್ರಾಮ ಪಂಚಾಯತಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಸದರಿ ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಎಂ.ಡಿ ಸೈಯದ ಪಟೇಲ್, (ಗ್ರಾ.ಉ) ಸಹಾಯಕ ನಿರ್ದೇಶಕ ರೇವಣಸಿದ್ದಪ್ಪ ಗೌಡರ್, ಕುಮಾರಿ ಕವಿತಾ, ಬಸ್ಸಮ್ಮ, ಸುಧಾ ದಂಡೆ, ಅನುಪಮಾ, ಕುಮಾರಿ ರಾಜೇಶ್ವರಿ, ಇಮಾಮ್ ಪಟೇಲ್, ಬಸು,್ಸ ಶಿವು ಕವಲಗ, ನಾಗರಾಜ್, ದೇವೇಂದ್ರ, ಮೊಸಿನ್ ಖಾನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.