ದೇಶದ ಪ್ರಮುಖ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ ನಮೋಶಿ ಸ್ವಾಗತ, ತೊಗರಿ ಬೆಳೆಗೆ ಹೆಚ್ಚಿನ ಬೆಂಬಲ ಬೆಲೆ ನೀಡಲು ರಾಜ್ಯ ಸರ್ಕಾರಕ್ಕೆ ಆಗ್ರಹ

ದೇಶದ ಪ್ರಮುಖ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ ನಮೋಶಿ ಸ್ವಾಗತ, ತೊಗರಿ ಬೆಳೆಗೆ ಹೆಚ್ಚಿನ ಬೆಂಬಲ ಬೆಲೆ ನೀಡಲು ರಾಜ್ಯ ಸರ್ಕಾರಕ್ಕೆ ಆಗ್ರಹ

ದೇಶದ ಪ್ರಮುಖ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ ನಮೋಶಿ ಸ್ವಾಗತ, ತೊಗರಿ ಬೆಳೆಗೆ ಹೆಚ್ಚಿನ ಬೆಂಬಲ ಬೆಲೆ ನೀಡಲು ರಾಜ್ಯ ಸರ್ಕಾರಕ್ಕೆ ಆಗ್ರಹ 

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು 2025-26ನೇ ಸಾಲಿನ ಮಾರುಕಟ್ಟೆ ಋತುವಿಗಾಗಿ 14 ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳನ್ನು (MSP) ಹೆಚ್ಚಿಸಲು ಅನುಮೋದನೆ ನೀಡಿದೆ ಇದನ್ನು ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ತಿಳಿಸಿದ್ದಾರೆ.

ಬೆಳೆಗಾರರಿಗೆ ತಮ್ಮ ಉತ್ಪನ್ನಗಳಿಗೆ ಲಾಭದಾಯಕ ಬೆಲೆಗಳನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 2025-26 ರ ಮಾರುಕಟ್ಟೆ ಋತುವಿನಲ್ಲಿ ಖಾರಿಫ್ ಬೆಳೆಗಳ MSP ಅನ್ನು ಹೆಚ್ಚಿಸಿದೆ. ಹಿಂದಿನ ವರ್ಷಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಳ ಮಾಡಲಾಗಿದೆ ಕಾರೆಳ್ಳು ಬೀಜ (ಕ್ವಿಂಟಲ್‌ಗೆ ರೂ. 820) ನಂತರ ರಾಗಿ (ಕ್ವಿಂಟಲ್‌ಗೆ ರೂ. 596), ಹತ್ತಿ (ಕ್ವಿಂಟಲ್‌ಗೆ ರೂ. 589) ಮತ್ತು ಎಳ್ಳು (ಕ್ವಿಂಟಲ್‌ಗೆ ರೂ. 579) ಶಿಫಾರಸು ಮಾಡಲಾಗಿದೆ. 

2025-26 ರ ಮಾರುಕಟ್ಟೆ ಋತುವಿನಲ್ಲಿ ಎಲ್ಲಾ ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳನ್ನು ನೀಡಲಾಗಿದೆ 

*ಕಲ್ಯಾಣ ಕರ್ನಾಟಕದ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ತೊಗರಿಗೆ ಕೇಂದ್ರ ಸರ್ಕಾರವು 2024-25 ರಲ್ಲಿ 7550 ರೂ ಬೆಂಬಲ ನಿಗದಿಪಡಿಸಲಾಗಿತ್ತು ರಾಜ್ಯ ಸರ್ಕಾರವು 450 ರೂ ಗಳನ್ನು ಸೇರಿಸಿ ಪ್ರತಿ ಕ್ವಿಂಟಾಲ್ 8000 ರೂಪಾಯಿಗಳನ್ನು ನೀಡಲಾಗುತಿತ್ತು ಆದರೆ ಈಗ ಕೇಂದ್ರ ಸರ್ಕಾರವು 2013 ರಲ್ಲಿದ್ದ ಬೆಂಬಲ ಬೆಲೆಗಿಂತ ಸುಮಾರು ಶೇಕಡಾ 86 ರಷ್ಟು ಹೆಚ್ಚಿಗೆ ಮಾಡಿದಂತಾಗಿದೆ ಇದು ನಮ್ಮ ಭಾಗದ ವಾಣಿಜ್ಯ ಬೆಳೆಯಾಗಿದ್ದು ಇದರಿಂದ ನಮ್ಮ ರೈತರಿಗೆ ಸಹಾಯವಾಗಿದೆ ಎಂದು ಹೇಳಿದ್ದಾರೆ 2025-26 ನೇ ಸಾಲಿನಲ್ಲಿ ತೊಗರಿ ಬೆಳೆಗೆ ಕೇಂದ್ರ ಸರ್ಕಾರವೆ 8000 ರೂಪಾಯಿ ನಿಗದಿ ಪಡಿಸಿದ್ದು ರಾಜ್ಯ ಸರಕಾರವು ಸಹ ಕನಿಷ್ಠ ಇನ್ನೂ 2000 ರೂಪಾಯಿಗಳನ್ನು ಹೆಚ್ಚಿಸಿ 10000 ರೂಪಾಯಿಗಳನ್ನು ನೀಡಬೇಕೆಂದು ಆಗ್ರಹಿಸುತ್ತೇನೆ ಇದರಿಂದ ತೋಗರಿ ಬೆಳೆಗಾರರಿಗೂ ಅಲ್ಪ ಸಹಾಯ ಮಾಡಿದಂತಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ