ಕಮಲ್ ಹಾಸನ್ ಕನ್ನಡಿಗರ ಕ್ಷಮೆಯಾಚಿಸಬೇಕು: ಸಂಗಮೇಶ ಎನ್ ಜವಾದಿ.

ಕಮಲ್ ಹಾಸನ್ ಕನ್ನಡಿಗರ ಕ್ಷಮೆಯಾಚಿಸಬೇಕು: ಸಂಗಮೇಶ ಎನ್ ಜವಾದಿ.
ಚಿಟಗುಪ್ಪ/ಹುಮನಾಬಾದ/ಬೀದರ:
ಕನ್ನಡಕ್ಕೆ ಎರಡೂವರೆ ಸಾವಿರ ವರ್ಷಗಳ ಇತಿಹಾಸವಿದ್ದು, ತಮಿಳಿನಿಂದ ಕನ್ನಡ ಹುಟ್ಟಿದೆ ಎಂದ ಕಮಲ್ ಹಾಸನ್ ಹೇಳಿದ ಮಾತನ್ನು ಒಪ್ಪಲ್ಲ, ಕೂಡಲೇ ಈ ಮಾತು ಕಮಲ್ ಹಾಸನ್
ವಾಪಸ್ ತೆಗೆದುಕೊಳ್ಳಬೇಕು. ಆಡಿದ ಮಾತಿಗೆ ಕನ್ನಡಿಗರ ಕ್ಷಮೆಯಾಚಿಸಬೇಕೆಂದು ಸಾಹಿತಿ , ಪರಿಸರ ಸಂರಕ್ಷಕ ಸಂಗಮೇಶ ಎನ್ ಜವಾದಿ ಆಗ್ರಹಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು
ಕಲೆಗೆ ಜಾತಿ ಇಲ್ಲ. ಎಲ್ಲಾ ಭಾಷೆಯ ಕಲಾವಿದರು ನಾವು ಗೌರವಿಸುತ್ತೇವೆ. ಆ ನಿಟ್ಟಿನಲ್ಲಿ ಕಮಲ್ ಹಾಸನ ರವರನ್ನು ಸಹ ಮೆಚ್ಚಿದ್ದೇವೆ. ಹಾಗಂತ ಕನ್ನಡ ತಮಿಳಿಂದ ಹುಟ್ಟಿದೆ ಎಂದ ಅವರು ಹೇಳಿದ ಮಾತು ಖಂಡಿತವಾಗಿಯೂ ಒಪ್ಪಲು ಸಾಧ್ಯವೇ ಇಲ್ಲ. ಕನ್ನಡಕ್ಕೆ ಎರಡೂವರೆ ಸಾವಿರ ವರ್ಷದ ಇತಿಹಾಸವಿದೆ. ಅಷ್ಟೇಕೆ
ಹನ್ನೆರಡನೆಯ ಶತಮಾನದ ಶರಣರು ಕನ್ನಡದಲ್ಲಿ ವಚನಗಳನ್ನು ರಚಿಸಿ, ಕನ್ನಡ ಭಾಷೆಯನ್ನು ದೇವ ಭಾಷೆಯನ್ನಾಗಿ ಮಾಡಿದ ಕೀರ್ತಿ ಬಸವಾದಿ ಶಿವಶರಣರಿಗೆ ಸಲ್ಲುತ್ತದೆ. ಎಲ್ಲಾ ರೀತಿಗಳಲ್ಲೂ ನೋಡಿದರು ಕನ್ನಡ ಭಾಷೆ ವಿಶ್ವ ಶ್ರೇಷ್ಠ ಭಾಷೆಯಾಗಿದೆ.
ಇಂತಹ ಜಗತ್ಪ್ರಸಿದ್ಧ ಕನ್ನಡ ಭಾಷೆಯ ಬಗ್ಗೆ ಅಗೌರವದಿಂದ ಮಾತನಾಡಿರುವ ಕಮಲ್ ಹಾಸನ್ ಈ ಕೂಡಲೇ ಆಡಿರುವ ಮಾತನ್ನು ವಾಪಸ್ ತೆಗೆದುಕೊಳ್ಳಬೇಕು. ಕನ್ನಡಿಗರ ಕ್ಷಮೆಯಾಚಿಸಬೇಕೆಂದು ಸಂಗಮೇಶ ಎನ್ ಜವಾದಿ ಆಗ್ರಹಿಸಿದ್ದಾರೆ.