ಕಲ್ಯಾಣ ಕರ್ನಾಟಕ ಭಾಗಕ್ಕೆ ಇಂಟರ್‌ಸಿಟಿ ರೈಲು ಸಂಚಾರ ಆರಂಭಿಸಲು ಕೇಂದ್ರ ಸಚಿವರಿಗೆ– ಶಶಿಲ್ ನಮೋಶಿ ಅವರ ಮನವಿ

ಕಲ್ಯಾಣ ಕರ್ನಾಟಕ ಭಾಗಕ್ಕೆ ಇಂಟರ್‌ಸಿಟಿ ರೈಲು ಸಂಚಾರ ಆರಂಭಿಸಲು ಕೇಂದ್ರ ಸಚಿವರಿಗೆ– ಶಶಿಲ್ ನಮೋಶಿ ಅವರ ಮನವಿ

ಕಲ್ಯಾಣ ಕರ್ನಾಟಕ ಭಾಗಕ್ಕೆ ಇಂಟರ್‌ಸಿಟಿ ರೈಲು ಸಂಚಾರ ಆರಂಭಿಸಲು ಕೇಂದ್ರ ಸಚಿವರಿಗೆ– ಶಶಿಲ್ ನಮೋಶಿ ಅವರ ಮನವಿ

ನವದೆಹಲಿ– ಕಲ್ಯಾಣ ಕರ್ನಾಟಕ ಭಾಗದ ರೈತರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ವರ್ತಕರ ಹಿತದೃಷ್ಟಿಯಿಂದ ಇಂಟರ್‌ಸಿಟಿ ರೈಲು ಸೇವೆ ಆರಂಭಿಸುವ ಅಗತ್ಯತೆಯನ್ನು ಎತ್ತಿಹಿಡಿದ ಶಾಸಕ ಶಶಿಲ್ ನಮೋಶಿ ಅವರು, ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ನವದೆಹಲಿಯ ವಿ. ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಈ ಮನವಿಯಲ್ಲಿ ಕಲಬುರಗಿ ನಗರವನ್ನು ಕೇಂದ್ರವಾಗಿ ಮಾಡಿಕೊಳ್ಳುವ ಮೂಲಕ ಯಾದಗಿರಿ, ಬೀದರ್, ರಾಯಚೂರು ಹಾಗೂ ಬಳ್ಳಾರಿ ನಗರಗಳನ್ನು ಸಂಪರ್ಕಿಸುವ ಇಂಟರ್‌ಸಿಟಿ ರೈಲು ಸೇವೆ ಆರಂಭಿಸುವ ಕುರಿತು ಶಿಫಾರಸು ಮಾಡಲಾಗಿದೆ. ಈ ರೈಲು ಸೇವೆಯಿಂದ ರೈತರು ಸಮೀಪದ ನಗರಗಳಿಗೆ ಪ್ರಯಾಣ ಮಾಡಿ ಬೀಜ, ರಸಗೊಬ್ಬರ ಹಾಗೂ ಕೃಷಿ ಉಪಕರಣಗಳನ್ನು ಖರೀದಿ ಮಾಡುವ ಹಾಗೂ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಿಕೊಳ್ಳಲು ಹೆಚ್ಚಿನ ಅನುಕೂಲವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಇದೇ ರೀತಿಯಲ್ಲಿ, ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು ಹಾಗೂ ಉಪನ್ಯಾಸಕರು ನಗರಗಳಿಂದ ತಮ್ಮ ಕೆಲಸದ ಸ್ಥಳಗಳಿಗೆ ಸುಲಭವಾಗಿ ಹೋಗಿ ಬರಬಹುದಾದ ಪ್ರಯಾಣದ ವ್ಯವಸ್ಥೆ ಕಲ್ಪಿಸುವ ಅಗತ್ಯತೆಯಿದೆ ಎಂದು ಅವರು ಹೇಳಿದ್ದಾರೆ. ಪ್ರತಿದಿನವೂ ಶಾಲೆ-ಕಾಲೇಜುಗಳಿಗೆ ಬಂದು ಹೋಗುವ ವಿದ್ಯಾರ್ಥಿಗಳು ಹಾಗೂ ವ್ಯಾಪಾರ ವ್ಯವಹಾರ ನಡೆಸುವ ವರ್ತಕರನ್ನು ಗಮನದಲ್ಲಿಟ್ಟುಕೊಂಡು ಈ ಸೇವೆ ಆರಂಭಿಸುವುದು ಉಪಯುಕ್ತವಾಗಲಿದೆ ಎಂದು ನಮೋಶಿ ತಿಳಿಸಿದ್ದಾರೆ.

ಅಲ್ಲದೇ, ಸೋಲ್ಲಾಪುರ-ಹೈದರಾಬಾದ್ ನಡುವಿನ ಇಂಟರ್‌ಸಿಟಿ ರೈಲು ಸೇವೆಯನ್ನು ಕೂಡ ಆರಂಭಿಸುವಂತೆ ಮನವಿ ಸಲ್ಲಿಸಿ, ಈ ನಿಟ್ಟಿನಲ್ಲಿ ದಕ್ಷಿಣ ಮಧ್ಯ ರೈಲ್ವೆಗೆ ಸೂಕ್ತ ನಿರ್ದೇಶನ ನೀಡುವಂತೆ ಕೇಂದ್ರ ಸಚಿವರಲ್ಲಿ ವಿನಂತಿಸಲಾಗಿದೆ.