ಪರಿಸರದ ಉಳಿವಿನ ಹಿಂದೆ ನಮ್ಮೆಲ್ಲರ ಅಳಿವು ಉಳಿವು ಅಡಗಿದೆ ಡಾ ಜಯಶ್ರೀ ಮುದ್ದಾ

ಪರಿಸರದ ಉಳಿವಿನ ಹಿಂದೆ ನಮ್ಮೆಲ್ಲರ ಅಳಿವು ಉಳಿವು ಅಡಗಿದೆ ಡಾ ಜಯಶ್ರೀ ಮುದ್ದಾ
ಕಲಬುರ್ಗಿ: ನಾವೆಲ್ಲರೂ ಪರಿಸರದ ಕೂಸುಗಳು. ಪರಿಸರದ ಉಳಿವಿನ ಹಿಂದೆ ನಮ್ಮೆಲ್ಲರ ಅಳಿವು ಉಳಿವು ಅಡಗಿದೆ ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಸ್ ನಿಜಲಿಂಗಪ್ಪ ದಂತ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ ಜಯಶ್ರೀ ಮುದ್ದಾ ಹೇಳಿದರು
ಅವರು ಕಾಲೇಜಿನ ಪಬ್ಲಿಕ್ ಹೆಲ್ತ್ ಡೆಂಟಿಸರಿ ವಿಭಾಗದ ನೇತೃತ್ವದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ನಿಮಿತ್ತ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ವಿಶ್ವ ಪರಿಸರ ದಿನಾಚರಣೆಯು ಕೆವಲ ಒಂದು ದಿನದ ಆಚರಣೆಗೆ ಸೀಮಿತವಾಗಬಾರದು.ಎಲ್ಲರೂ ಸ್ವಚ್ಛ ಪರಿಸರಕ್ಕೆ ಪಣ ತೊಟ್ಟು ಕೆಲಸ ಮಾಡಬೇಕು ಎಂದು ಹೇಳಿದರು. ಯುವಕರು ಹೆಚ್ಚು ಹೆಚ್ಚು ಗಿಡಗಳನ್ನು ಬೆಳೆಸುವ ಮೂಲಕ ಪರಿಸರ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು.
ಮಾನವ ಸೇರಿದಂತೆ ಇತರೆ ಪ್ರಾಣಿ, ಪಕ್ಷಿಗಳು, ಸೇರಿದಂತೆ ಪ್ರತಿಯೊಂದು ಜೀವ ಸಂಕುಲ ಆಹಾರ, ಗಾಳಿ, ನೀರು ಇತರೆ ಅಗತ್ಯತೆಗಳಿಗಾಗಿ ಪರಿಸರವನ್ನ ಅವಲಂಭಿಸಿದೆ ಎಂದರೆ ತಪ್ಪಾಗಲಾರದು. ಆದರೆ ಇತ್ತಿಚಿನ ದಿನಗಳಲ್ಲಿ ಮಾನವನು ಆಧುನಿಕ ಬದುಕಿನ ಗೀಳಿಗೆ ಬಿದ್ದು ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಈಗ ಮಾನವನ ಈ ದುರಾಸೆಯಿಂದ ಗಾಳಿ, ನೀರು, ಮಣ್ಣು ಮುಂತಾದ ಪರಿಸರದ ಪ್ರತಿಯೊಂದು ಅಂಶವೂ ಕಲುಷಿತಗೊಂಡಿದೆ. ಮನುಷ್ಯ ತನ್ನ ಅಭಿವೃದ್ಧಿಗಾಗಿ ತನಗೆ ಅರಿವಿಲ್ಲದಂತೆ ಪರಿಸರವನ್ನು ಹಾಳು ಮಾಡುತ್ತಿದ್ದಾನೆ.
ಹೀಗಾಗಿ ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಬೇಕು ಎಂದು ಹೇಳಿದರು
ಈ ಸಂದರ್ಭದಲ್ಲಿ ಉಪ ಪ್ರಾಚಾರ್ಯರಾದ ಡಾ ವೀರೆಂದ್ರ ಪಾಟೀಲ್, ವಿಭಾಗದ ಮುಖ್ಯಸ್ಥರಾದ ಡಾ ನವೀನ್ ಕಾರಬಾರಿ, ಡಾ ಸುಭಾಷ್ ಪಾಟೀಲ್,ಡಾ ಸುವರ್ಣ ಬಿರಾದಾರ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಕಾಲೇಜಿನ ಆವರಣದಲ್ಲಿ ವಿವಿಧ ಬಗೆಯ ಗಿಡಗಳನ್ನು ನೆಡಲಾಯಿತು.