ವಿಕಸಿತ ಭಾರತ ಅಮೃತ ಕಾಲ ಸೇವೆ: ಜಗದೀಶ್ ಶೆಟ್ಟರ್ರಿಗೆ ಕಲಬುರಗಿಯಲ್ಲಿ ಸನ್ಮಾನ

ವಿಕಸಿತ ಭಾರತ ಅಮೃತ ಕಾಲ ಸೇವೆ: ಜಗದೀಶ್ ಶೆಟ್ಟರ್ರಿಗೆ ಕಲಬುರಗಿಯಲ್ಲಿ ಸನ್ಮಾನ
ಕಲಬುರಗಿ: ವಿಕಸಿತ ಭಾರತ ಅಮೃತ ಕಾಲ ಸೇವೆ ಪ್ರಯುಕ್ತ ಕಲಬುರಗಿಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದರಾದ ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಭವ್ಯವಾಗಿ ಸನ್ಮಾನಿಸಲಾಯಿತು.
ಬಿಜೆಪಿ ರೈತ ಮೋರ್ಚಾದ ಜಿಲ್ಲಾ ಕಾರ್ಯದರ್ಶಿ ಮಲ್ಲಿನಾಥ್ ಪಾಟೀಲ್ ಕಾಳಗಿ ಅವರು ಅವರನ್ನು ಗೌರವಪೂರ್ವಕವಾಗಿ ಸನ್ಮಾನಿಸಿ ಅಭಿನಂದಿಸಿದರು.
ಈ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಅಶೋಕ ಬಗಲಿ, ಮಾಜಿ ಸಂಸದ ಡಾ. ಉಮೇಶ್ ಜಾದವ್ , ಬಾಬುರಾವ್ ಚವ್ವಾಹಣ ,ಸೇರಿದಂತೆ ಪಕ್ಷದ ಹಲವು ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಸಮಯದಲ್ಲಿ ಜಗದೀಶ್ ಶೆಟ್ಟರ್ ಅವರು ಅಮೃತ ಕಾಲ ಸೇವೆ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿ, ಬಿಜೆಪಿ ಸರ್ಕಾರದ ಅಭಿವೃದ್ಧಿ ನಿಟ್ಟಿನ ಸಾಧನೆಗಳ ಬಗ್ಗೆ ಮಾತನಾಡಿದರು.
—