ಭೀಕರ ಅಪಘಾತ: ದೇವನಹಳ್ಳಿಯಲ್ಲಿ ನಾಲ್ವರು ದುರ್ಮರಣ – ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು

ಭೀಕರ ಅಪಘಾತ: ದೇವನಹಳ್ಳಿಯಲ್ಲಿ ನಾಲ್ವರು ದುರ್ಮರಣ – ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು

AI PHOTO

ಭೀಕರ ಅಪಘಾತ: ದೇವನಹಳ್ಳಿಯಲ್ಲಿ ನಾಲ್ವರು ದುರ್ಮರಣ – ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಸಮೀಪದ ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಅಸುನೀಗಿದ್ದಾರೆ. ಮೃತರಲ್ಲಿ ಇಬ್ಬರು ನಿರಾಪರಾಧ ಮಕ್ಕಳು ಸೇರಿದ್ದಾರೆ.

ತಿರುಪತಿಯಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಆಂಧ್ರ ಪ್ರದೇಶ ಸಾರಿಗೆ ಸಂಸ್ಥೆಯ ಬಸ್ಸು ಮತ್ತು ಲಾರಿಯ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಬಸ್ಸು ಸಂಪೂರ್ಣ ನಜ್ಜುಗುಜ್ಜಾಗಿ ಹಿನ್ನೆಲೆಯಲ್ಲಿ ನಾಲ್ವರು ಪ್ರಯಾಣಿಕರು ದುರ್ಮರಣಕ್ಕೀಡಾಗಿದ್ದಾರೆ.

ಮೃತರಲ್ಲಿ ಕೇಶವರೆಡ್ಡಿ (44), ತುಳಸಿ (21), ಪ್ರಣತಿ (4) ಮತ್ತು ಒಂದು ವರ್ಷದ ಮಗು ಸೇರಿದ್ದಾರೆ. ಬಸ್‌ನಲ್ಲಿದ್ದ ಇತರ 16 ಪ್ರಯಾಣಿಕರು ಗಾಯಗೊಂಡಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ತಕ್ಷಣವೇ ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ಕಾರಣ ಚಾಲಕನ ನಿದ್ದೆ ಮಂಪರಿನಲ್ಲಿ ಓವರ್‌ಟೇಕ್ ಮಾಡಲು ಯತ್ನಿಸಿದಾಗ ಎದುರಿನಿಂದ ಬಂದ ಲಾರಿಗೆ ಬಸ್ಸು ಡಿಕ್ಕಿಯಾಗಿದ್ದು, ಈ ಕುರಿತು ಪ್ರಾಥಮಿಕ ಮಾಹಿತಿ ಲಭಿಸಿದೆ. ಘಟನೆಯ ಕುರಿತು ಹೊಸಕೋಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.