ಅಂತರರಾಷ್ಟ್ರೀಯ ಮುಟ್ಟಿನ ನೈರ್ಮಲ್ಯ ಕುರಿತು ಪೋಸ್ಟರ್ ಬಿಡುಗಡೆ

ಅಂತರರಾಷ್ಟ್ರೀಯ ಮುಟ್ಟಿನ ನೈರ್ಮಲ್ಯ ಕುರಿತು ಪೋಸ್ಟರ್ ಬಿಡುಗಡೆ

ಅಂತರರಾಷ್ಟ್ರೀಯ ಮುಟ್ಟಿನ ನೈರ್ಮಲ್ಯ ಕುರಿತು ಪೋಸ್ಟರ್ ಬಿಡುಗಡೆ

ಕಲಬುರಗಿ: ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಿರಾಪುರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಲಬುರ್ಗಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಿರಾಪುರ್ ಪ್ರಗತಿ ಅಭಿವೃದ್ಧಿ ಸಂಸ್ಥೆ, ಕಲ್ಬುರ್ಗಿ ಮತ್ತು ಶಿಶು ಅಭಿವೃದ್ಧಿ ಯೋಜನೆ, ಕಲಬುರ್ಗಿ ನಗರ ಇವರುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಹದಿ ಹರೆಯದವರ ಆರೋಗ್ಯ ಮತ್ತು ಕ್ಷೇಮ ದಿನಾಚರಣೆ ಅಂಗವಾಗಿ "ಅಂತರರಾಷ್ಟ್ರೀಯ ಮುಟ್ಟಿನ ನೈರ್ಮಲ್ಯ "ದಿನ 2025 ಹಾಗೂ ಬಾಲ್ಯ ವಿವಾಹ ತಡೆ ಕುರಿತು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. 

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಿರಾಪುರದ ಆಡಳಿತ ವೈದ್ಯಾಧಿಕಾರಿಗಳಾದ ಡಾ. ಅನಿತಾ ಜಾದವ್ ಅವರು "ಅಂತರರಾಷ್ಟ್ರೀಯ ಮುಟ್ಟಿನ ನೈರ್ಮಲ್ಯ ಕುರಿತು ಪೋಸ್ಟರ್ ಬಿಡುಗಡೆ ಮಾಡಿದರು. 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಿರಾಪುರ್ ಅಂಗನವಾಡಿ ವಲಯ ಮೇಲ್ವಿಚಾರಕಿಯಾದ ಮಲ್ಲಮ್ಮ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಡಾ. ಸುಜಾತಾ ಪಾಟೀಲ್ ಆಗಮಿಸಿದರು. 

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಸಮೂಹ ಸಂಪನ್ಮೂಲ ಸಂಸ್ಥೆಯ ಪಿರಿಯಡ್ ಫೆಲೋ ಕುಮಾರಿ ಲಕ್ಷ್ಮಿ ದೇವಿ ಇಟಗಿ ಅವರು ಕಾರ್ಯಕ್ರಮದ ಸಂಪೂರ್ಣ ಮಾಹಿತಿಯನ್ನು ನೀಡಿದರು. ಅತಿಥಿಗಳಾಗಿ ರಾಷ್ಟ್ರೀಯ ಕಿಶೋರ, ಸ್ವಾಸ್ಥ ಕಾರ್ಯಕ್ರಮದ ಆಪ್ತ ಸಮಾಲೋಚಕರಾದ ಅಲ್ಲಮಪ್ರಭು ನಿಂಬರ್ಗಾ, ಪ್ರಗತಿ ಅಭಿವೃದ್ಧಿ ಸಂಸ್ಥೆಯ ಬ್ರಹ್ಮಾನಂದ ಮಿಂಚಾ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಅರ್ಚನಾ ಪಾಟೀಲ್, ಅನ್ನಪೂರ್ಣ ನಾಯ್ಕೋಡಿ, ಅಂಬಿಕಾ ಪೂಜಾರಿ, ನಿರ್ಮಲ, ಮಹದೇವಿ ಸೇರಿದತೆ ಸ್ಥಳೀಯ ಕಿಶೋರಿಯರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಆರ್.ಕೆ.ಎಸ್.ಕೆ ಆಪ್ತ ಸಮಾಲೋಚಕರುಗಳು, ಮಹಿಳಾ ಸ್ವ-ಸಹಾಯ ಸಂಘದ ಪ್ರತಿನಿಧಿಗಳು, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸುಮಾರು 140ಕ್ಕೂ ಹೆಚ್ಚು ಕಿಶೋರಿಯರಿಗೆ ಶುಚಿ ಪ್ಯಾಡ್ ಗಳನ್ನು ವಿತರಿಸಲಾಯಿತು ಕಾರ್ಯಕ್ರಮದ ನಂತರ ಬಾಲ್ಯ ವಿವಾಹದ ಕುರಿತು ಸರ್ಕಾರ ಜಾರಿಗೆ ತಂದಿರುವ ಕಾನೂನುಗಳ ಕುರಿತು ಮಾಹಿತಿಯನ್ನು ನೀಡಲಾಯಿತು

.