ಶ್ರೀ ಹಿಂಗುಲಾಂಬಿಕ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

ಶ್ರೀ ಹಿಂಗುಲಾಂಬಿಕ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ
ಕಲಬುರಗಿ: ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಶ್ರೀ ಹಿಂಗುಲಾಂಬಿಕ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಹಾಗೂ ಶ್ರೀ ಬಸವೇಶ್ವರ ಬೋಧನಾ ಆಸ್ಪತ್ರೆಯ ಬ್ಲಡ್ ಬ್ಯಾಂಕ್ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರವನ್ನು ಸೇಡಂ ರಸ್ತೆಯಲ್ಲಿರುವ ಶ್ರೀ ಹಿಂಗುಲಾಂಬಿಕ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಡಾ. ಕಾಂಚನ ಹಿರೇಮಠ್ ಅವರು ಮಾತನಾಡಿ ವಿದ್ಯಾರ್ಥಿಗಳಿಗೆ ರಕ್ತದಾನದ ಮಹತ್ವ ಮತ್ತು ಅದನ್ನು ಒಂದು ಅಭಿಯಾನವಾಗಿ ರೂಪಿಸುವ ಮಹತ್ವವನ್ನು ಕುರಿತು ಸವಿಸ್ತಾರವಾಗಿ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಮಾಹಿತಿಯನ್ನು ನೀಡಿದರು.
ಶಿಬಿರದಲ್ಲಿ ಉಪಸ್ಥಿತರಿದ್ದ ಬಸವೇಶ್ವರ ಬೋಧನಾ ಆಸ್ಪತ್ರೆಯ ರೋಗ ನಿಧಾನ ವಿಭಾಗದ ಮುಖ್ಯಸ್ಥರಾದ ಡಾ. ರಾಜೇಶ್ ಪಾಟೀಲ್, ಶ್ರೀ ಹಿಂಗುಲಾAಬಿಕ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಅಲ್ಲಮಪ್ರಭು ಗುಡ್ಡ ಅವರು ರಕ್ತದಾನ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದಿಸಿದರು.
ಶಿಬಿರದಲ್ಲಿ ಡಾ. ವಿಜಯಲಕ್ಷ್ಮಿ ಹರ್ನುರ್ಕರ್, ಡಾ. ವಿಕಾಸ್ ಚೌಹಾಣ್, ಡಾ. ಜೋಯ್, ಪರಮೇಶ್ವರ್ ಗುಡ್ಡ, ಮಹಾಂತ ಸ್ವಾಮಿ, ನರೇಶಕುಮಾರ ತಿವಾರಿ, ಅಮರೇಶ್ ಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು. 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ರಕ್ತದಾನ ಮಾಡಿದರು.