ನಟ ಕಮಲ್ ಹಾಸನ್ ಚಿತ್ರ ಬಹಿಷ್ಕಾರಕ್ಕೆ ಅಭಿಶೇಕ ಬಾಲಾಜಿ ಒತ್ತಾಯ

ನಟ ಕಮಲ್ ಹಾಸನ್ ಚಿತ್ರ ಬಹಿಷ್ಕಾರಕ್ಕೆ ಅಭಿಶೇಕ ಬಾಲಾಜಿ ಒತ್ತಾಯ
ಕಲಬುರಗಿ: ತಮಿಳುನಿಂದಲೇ ಕನ್ನಡ ಹುಟ್ಟಿದ್ದು ಎಂದು ಹೇಳುವ ಮೂಲಕ ಅವಮಾನ ಮಾಡಿರುವ ತಮಿಳು ನಟ ಕಮಲ್ ಹಾಸನ್ ನಟನೆಯ ಥಗ್ ಲೈಪ್ ಚಿತ್ರ ಬಹಿಷ್ಕರಿಸಬೇಕು ಎಂದು ಕರವೇ(ಪ್ರವೀಣ ಶೆಟ್ಟಿ) ಬಣದ ಕಲ್ಯಾಣ ಕರ್ನಾಟಕ ಅಧ್ಯಕ್ಷ ಅಭಿಶೇಕ ಬಾಲಾಜಿ ಅವರು ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಕನ್ನಡದ ನೆಲ,ಜಲ,ಭಾಷೆ ವಿಚಾರಕ್ಕೆ ಧಕ್ಕೆ ಬಂದಾಗ ಧ್ವನಿ ಎತ್ತುವುದು ಪ್ರತಿಯೊಬ್ಬ ಸ್ವಾಭಿಮಾನಿ ಕನ್ನಡಿಗನ ಕರ್ತವ್ಯ. ಚಿತ್ರ ನಟ ಕಮಲ್ ಹಾಸನ್ರ ಥಗ್ ಲೈಫ್ ಚಿತ್ರ ಪ್ರದರ್ಶನಕ್ಕೆ ಸುಪ್ರಿಂ ಕೋರ್ಟ್ ಆದೇಶ ನೀಡಿದೆ. ಅದನ್ನ ಒಪ್ಪಿಕೊಳ್ಳೋಣ, ಆದರೆ ಅದನ್ನ ನೋಡಲೇಬೇಕು ಎಂದು ಆದೇಶಿಸಿಲ್ಲ. ಹಾಗಾಗಿ ಕನ್ನಡಿಗರನ್ನ ಕೆರಳಿಸಿರುವ ದುರಂಕಾರಿ ಕಮಲ್ ಹಾಸನ್ ಚಿತ್ರವನ್ನ ಕನ್ನಡಿಗರು ನೋಡಬಾರದು. ಚಿತ್ರ ನಿರ್ಮಾಪಕರು ಚಿತ್ರ ವಿತರಕರು ಕೂಡ ಚಿತ್ರಮಂದಿರದಲ್ಲಿ ಪ್ರದರ್ಶನಕ್ಕೆ ಅವಕಾಶ ಕೊಡದೇ, ಕನ್ನಡದ ಆಸ್ಥಿತೆಗೆ ಗೌರವಿಸಬೇಕು ಎಂದರು.
ತಮಿಳುನಾಡಿನಲ್ಲಿ ಸಾಕಷ್ಟು ತಿರಸ್ಕಾರ, ಅಪಕೀರ್ತಿ ಪಡೆದಿರುವ ನಟ ಕಮಲ್ ಹಾಸನ್ ಕನ್ನಡದ ಭಾಷೆ ಬಗ್ಗೆ ಅವಹೇಳನವಾಗಿ ಮಾತನಾಡಿ ಅವಮಾನ ಮಾಡಿದ್ದಾರೆ. ಕ್ಷಮೆಯನ್ನೇ ಕೇಳದೆ ದುರಂಕಾರ ಮೆರೆದಿರುವ ಕಮಲ್ ಹಾಸನ್ ಚಿತ್ರವನ್ನ ನೋಡದೆ ಕನ್ನಡಿಗರು ತಕ್ಕ ಪಾಠ ಕಲಿಸಬೇಕು. ಕೆಲವು ಸಂಘ ಸಂಸ್ಥೆಗಳು ಕಮಲ್
ಹಾಸನ್ ಗೆ ನೀಡಿರುವ ಪ್ರಶಸ್ತಿಗಳನ್ನು ಹಿಂಪಡೆಯಬೇಕು ಎಂದು ಅವರು ಆಗ್ರಹಿಸಿದರು.