ಜಿಲ್ಲಾ ಮಟ್ಟದ ವಚನ ಕಂಠಪಾಠ ಸ್ಪರ್ಧೆ ಜೂನ್ 28ಕ್ಕೆ

ಜಿಲ್ಲಾ ಮಟ್ಟದ ವಚನ ಕಂಠಪಾಠ ಸ್ಪರ್ಧೆ ಜೂನ್ 28ಕ್ಕೆ

ಜಿಲ್ಲಾ ಮಟ್ಟದ ವಚನ ಕಂಠಪಾಠ ಸ್ಪರ್ಧೆ ಜೂನ್ 28ಕ್ಕೆ

ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಅವರ ಜನ್ಮದಿನದ ಅಂಗವಾಗಿ ರಾವೂರ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯ ವತಿಯಿಂದ ಜಿಲ್ಲಾ ಮಟ್ಟದ ವಚನ ಕಂಠಪಾಠ ಸ್ಪರ್ಧೆ ಜೂನ್ 28 ರಂದು ಶನಿವಾರ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ ಸಂಯೋಜಕ ಸಿದ್ದಲಿಂಗ ಬಾಳಿ ತಿಳಿಸಿದ್ದಾರೆ. 

ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಮಕ್ಕಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಕನಿಷ್ಠ 5 ವಚನ ಮೇಲ್ಪಟ್ಟು ಹೇಳುವವರು ಭಾಗವಹಿಸಬೇಕು. ಅಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ಸ್ಪರ್ಧೆಯಲ್ಲಿ ಭಾಗವಹಿಸುವ ಮಕ್ಕಳು ತಾವು ಹೇಳುವ ವಚನಗಳನ್ನು ಬರೆದು ತೀರ್ಪುಗಾರರಿಗೆ ಕೊಡಬೇಕು. 

ಪ್ರಾಥಮಿಕ ಮತ್ತು ಪ್ರೌಢ ವಿಭಾಗದಲ್ಲಿ ವಿಜೇತರಾದವರಿಗೆ ಜುಲೈ 2 ರಂದು ನಡೆಯುವ ಡಾ. ಫ. ಗು. ಹಳಕಟ್ಟಿ ಅವರ ಜನ್ಮದಿನದ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳ ಸಾನಿದ್ಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಹುಮಾನ ವಿತರಣೆ ಮಾಡಲಾಗುವು. ಆಸಕ್ತರು ಜೂನ್ 27ರ ಒಳಗಾಗಿ 9590092113ಗೆ ಕರೆ ಮಾಡಿ ಹೆಸರು ನೋoದಾಯಿಸಿಕೊಳ್ಳ ಎಂದು ಬಾಳಿ ಅವರು ತಿಳಿಸಿದ್ದಾರೆ.