ಬೀಳವಾರ ಪಂಚಾಯತ್ ಅವ್ಯವಹಾರ ಸದಸ್ಯರ ಮಾತು ಕೇಳದ ಅಧಿಕಾರಿಗಳು

ಬೀಳವಾರ ಪಂಚಾಯತ್ ಅವ್ಯವಹಾರ ಸದಸ್ಯರ ಮಾತು ಕೇಳದ ಅಧಿಕಾರಿಗಳು
ಪಿಡಿಓ, ಇಓ ವಿರುದ್ಧ ಗಂಭೀರ ಆರೋಪ
ಬಿಳವಾರ್ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಜಮಖಂಡಿ ಗ್ರಾಮದಲ್ಲಿ ಕಳೆದ ಒಂದು ತಿಂಗಳಿಂದ ಕುಡಿಯುವ ನೀರಿನ ಸರಬರಾಜು ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಆದರೆ, ಗ್ರಾಮ ಪಂಚಾಯತಿಯ ಅಧಿಕಾರಿಗಳು ಈ ಕುರಿತು ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ.
15ನೇ ಹಣಕಾಸು ಯೋಜನೆ ಅಡಿಯಲ್ಲಿ ಕಾಮಗಾರಿ ಮಾಡದೆ ಅವ್ಯವಹಾರ ಮಾಡಿ ಅವರು ಸರ್ಕಾರದ ಹಣವನ್ನು ಲೂಟಿ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಬಸವ ನಿವೇಶನ ಯೋಜನೆಯಡಿ . 13 ಮನೆಗಳು ನಿರ್ಲಕ್ಷಿತ ಪೆಂಡಿಂಗ್ ಪಟ್ಟಿಯಲ್ಲಿ ಉಳಿದಿವೆ.ಈ ಕುರಿತು ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ (ಇಓ), ಪಿಡಿಓ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ವಿರುದ್ಧ ಗ್ರಾಮ ಪಂಚಾಯಿತಿ ಸದಸ್ಯ ಅಯ್ಯಣಗೌಡ ಗಂಭೀರ ಆರೋಪ ಮಾಡಿದ್ದಾರೆ.
ಗ್ರಾಮ ಪಂಚಾಯತಿ ಸದಸ್ಯರು ಕಾಮಗಾರಿಗಳ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರು ಅವರ ಮಾತು ಕೇಳುತ್ತಿಲ್ಲ. ಒಬ್ಬ ಜವಾಬ್ದಾರಿತ್ತ ಗ್ರಾಮ ಪಂಚಾಯಿತಿ ಸದಸ್ಯರ ಮಾತು ಕೇಳದ ಅಧಿಕಾರಿಗಳು ಸಾಮಾನ್ಯ ಪ್ರಜೆಗಳ ಗತಿಯೋನು ಎನ್ನುವ ಪ್ರಶ್ನೆ ಕಾಡುತ್ತಿದೆ.
ಗ್ರಾಮಸ್ಥರು ಅಧಿಕಾರಿಗಳ ನಿರ್ಲಕ್ಷ್ಯದಿಂದ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಕೂಡಲೇ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.
.