ವಾಡಿ ಯಲ್ಲಿ ಬಿಜೆಪಿ ರಾಜ್ಯ ನಾಯಕರ ಜನ್ಮದಿನದ ಪ್ರಯುಕ್ತ ದೇವಸ್ಥಾನದಲ್ಲಿ ವಿಶೇಷ ಪೂಜೆ

ವಾಡಿ ಯಲ್ಲಿ ಬಿಜೆಪಿ ರಾಜ್ಯ ನಾಯಕರ ಜನ್ಮದಿನದ ಪ್ರಯುಕ್ತ ದೇವಸ್ಥಾನದಲ್ಲಿ ವಿಶೇಷ ಪೂಜೆ

ವಾಡಿ ಯಲ್ಲಿ ಬಿಜೆಪಿ ರಾಜ್ಯ ನಾಯಕರ ಜನ್ಮದಿನದ ಪ್ರಯುಕ್ತ ದೇವಸ್ಥಾನದಲ್ಲಿ ವಿಶೇಷ ಪೂಜೆ

ವಾಡಿ: ಪಟ್ಟಣದ ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಬಿಜೆಪಿ ರಾಜ್ಯ ನಾಯಕರು ಹಾಗೂ ವಿಧಾನ ಪರಿಷತ್ತನ ವಿರೋಧ ಪಕ್ಷದ ನಾಯಕ ಚಲುವಾದಿ ನಾರಾಯಣಸ್ವಾಮಿ ಹಾಗೂ ಕೇಂದ್ರ ರೈಲ್ವೆ,ಜಲಶಕ್ತಿ ಸಚಿವ ವಿ ಸೋಮಣ್ಣ ಅವರ ಜನ್ಮದಿನದ ಪ್ರಯುಕ್ತ ರವಿವಾರ ಶಕ್ತಿ ಆಂಜನೇಯ ದೇವಸ್ಥಾನ ದಲ್ಲಿ ವಿಶೇಷ ಪೂಜೆ ನಡೆಸಿ ಪ್ರಸಾದ ವಿತರಿಸಲಾಯಿತು.

ಇದೆ ವೇಳೆ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಅವರು ಮಾತನಾಡಿ ಇಡೀ ರಾಜ್ಯದ ಪ್ರತಿಯೊಬ್ಬ ಕಾರ್ಯಕರ್ತನ ಮನದಲ್ಲಿ ಪಕ್ಷ ಸಂಘಟನೆಯ ಬಗ್ಗೆ ಮತ್ತು ಸ್ವಾಭಿಮಾನದ ಬಗ್ಗೆ ಕಿಚ್ಚನ್ನು ಮೂಡಿಸುವಲ್ಲಿ ಚಲುವಾದಿ ನಾರಾಯಣಸ್ವಾಮಿ ಹಾಗೂ 

ವಿ ಸೋಮಣ್ಣ ಅವರು ಪ್ರಮುಖರಾಗಿದ್ದಾರೆ ಎಂದರು.

ನಮ್ಮ ಹೆಮ್ಮೆಯ ಚಲುವಾದಿ ನಾರಾಯಣಸ್ವಾಮಿ ಅವರು ವಿಧಾನ ಪರಿಷತನ ಪ್ರಬಲ ವಿರೋಧ ಪಕ್ಷದ ನಾಯಕರಾಗಿ ರಾಜ್ಯ ಸರ್ಕಾರದ ದುರಾಡಳಿತದಲ್ಲಿ ತೊಡಗಿದ್ದವರಿಗೆ ಸಿಂಹಸ್ವಪ್ನವಾಗಿದ್ದಾರೆ.

ತಮ್ಮ ಸರಳ ವ್ಯಕ್ತಿತ್ವದಿಂದ ಎಲ್ಲರ ಅಚ್ಚುಮೆಚ್ಚಿನವರಾಗಿದ್ದು,

ಸಾಮಾನ್ಯ ಕಾರ್ಯಕರ್ತನ ಬಗ್ಗೆ ಕಾಳಜಿ ವಹಿಸಿ,ಸ್ಪಂದಿಸುವ ಗುಣದಿಂದ ಎಲ್ಲಾ ಕಾರ್ಯಕರ್ತರಿಗೆ ಆತ್ಮೀಯ ನಾಯಕರಾಗಿದ್ದಾರೆ.

ಕೇಂದ್ರ ಸಚಿವರಾದ ವಿ ಸೋಮಣ್ಣ ಅವರು ಪ್ರಧಾನಿ ಮೋದಿ ಜಿ ಅವರ ದೇಶಾಭಿವೃದ್ಧಿ ಆಶಯದಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಅನೇಕ ಪ್ರಗತಿಪರ ಯೋಜನೆಯನ್ನು ರೈಲ್ವೆ ಇಲಾಖೆಯಲ್ಲಿ ಅಳವಡಿಸಿ ಜನಸಾಮಾನ್ಯರ ಬದುಕಿಗೆ ಪೂರಕವಾಗಿ ಶ್ರಮಿಸುತ್ತಿದ್ದಾರೆ.

ಇವರ ಜನಪರ ಕಾಳಜಿ, ದೇಶಾಭಿಮಾನ,ಪಕ್ಷ ನಿಷ್ಠೆ ನಮೆಲ್ಲರಿಗೂ ಪ್ರೇರಣೆಯಾಗಿದೆ.ನಮ್ಮ ಹೆಮ್ಮೆಯ ನಾಯಕರಾದ ಚಲುವಾದಿ ನಾರಾಯಣಸ್ವಾಮಿ ಹಾಗು ವಿ ಸೋಮಣ್ಣ ಅವರಿಗೆ ದೇವರು ಅಯುಷ್ಯಾರೋಗ್ಯ ಕೊಟ್ಟು ಸದಾ ಕಾಪಾಡಲಿ ಎಂದು ನಾವೆಲ್ಲರೂ ಶುಭಕೊರುತ್ತೇವೆ ಎಂದು ಹೇಳಿದರು.

ಈ ಸಂಧರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಮಂಗಳಮೂರ್ತಿ ಜ್ಯೋಶಿ, ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ರವಿ ನಾಯಕ, ಎಸ್ ಸಿ ಮೂರ್ಚಾ ಅಧ್ಯಕ್ಷ ದೌಲತರಾವ ಚಿತ್ತಾಪುರಕರ್, ಮುಖಂಡರಾದ ರಾಜು ಮುಕ್ಕಣ್ಣ,ಭೀಮರಾವ ದೊರೆ, ಅರ್ಜುನ ಕಾಳೆಕರ,ಶಿವಶಂಕರ ಕಾಶೆಟ್ಟಿ,ಹರಿ ಗಲಾಂಡೆ, ಮಲ್ಲಿಕಾರ್ಜುನ ಸಾತಖೇಡ, ಯಂಕಮ್ಮ ಗೌಡಗಾಂವ, ನಿರ್ಮಲ ಇಂಡಿ,ಉಮಾಭಾಯಿ ಗೌಳಿ,ಶಿವುಪ್ರಸಾದ್ ಗೋಳಾ,

ದತ್ತಾ ಖೈರೆ,ವಿಶ್ವನಾಥ ನಾಯಕ, ಪರಮೇಶ್ವರ ಚೊಪಡೆ ಸೇರಿದಂತೆ ಅನೇಕರು ಪಾಲ್ಗೊಂಡು ಪರಸ್ಪರ ಸಿಹಿ ಹಂಚಿ,ಸಾರ್ವಜನಿಕರಿಗೆ ಹಣ್ಣು ಹಂಪಲಗಳನ್ನು ವಿತರಿಸಿ ಸಂಭ್ರಮಿಸಿದರು.