ಕಲಬುರಗಿ ವಿಮಾನ ನಿಲ್ದಾಣಕ್ಕೆ ಶರಣಬಸವೇಶ್ವರರ ಹೆಸರಿಡಲು ಶಾಂತರೆಡ್ಡಿ ಪೇಠಶಿರೂರ ಮನವಿ

ಕಲಬುರಗಿ ವಿಮಾನ ನಿಲ್ದಾಣಕ್ಕೆ ಶರಣಬಸವೇಶ್ವರರ ಹೆಸರಿಡಲು ಶಾಂತರೆಡ್ಡಿ ಪೇಠಶಿರೂರ ಮನವಿ
ಕಲಬುರಗಿ, ಕಲ್ಯಾಣ ಕರ್ನಾಟಕದ ಪ್ರಮುಖ ಕೇಂದ್ರ ಸ್ಥಾನವಾದ ಕಲಬುರಗಿಯಲ್ಲಿ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣಕ್ಕೆ ಈ ಭಾಗದ ಶರಣ ಶ್ರೇಷ್ಠ ಮತ್ತು ದಾಸೋಹ & ಕಾಯಕದ ಮೂಲಕ ಪವಾಡ ಮಾಡಿದ ಮಹಾಪುರುಷ ಶರಣಬಸವೇಶ್ವರರ ಹೆಸರು ಇಡಬೇಕು ಎಂದು ವೀರಶೈವ ಲಿಂಗಾಯತ ಮಹಾಸಭಾ ನಗರ ಯುವ ಘಟಕ ಅಧ್ಯಕ್ಷ ಶಾಂತರೆಡ್ಡಿ ಪೇಠಶಿರೂರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ ಅವರು 200 ನೂರು ವರ್ಷಗಳಿಂದ ಈ ಭಾಗದಲ್ಲಿ ದಾಸೋಹ ಆರಂಭಿಸಿ ಅಸಂಖ್ಯಾತ ಭಕ್ತರಿಗೆ ಅನ್ನ ದಾಸೋಹ ಮಾಡಿದ್ದಾರೆ.
ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ದೇವಸ್ಥಾನಕ್ಕೆ ಪ್ರತಿ ವರ್ಷ ಭಾರತದ ವಿವಿಧ ರಾಜ್ಯಗಳಿಂದ ಭಕ್ತರು ಆಗಮಿಸಿ ಶರಣರ ದರ್ಶನ ಆಶೀರ್ವಾದ ಪಡೆದುಕೊಳ್ಳುತ್ತಾರೆ.
ಪ್ರತಿ ವರ್ಷ ಶ್ರೀ ಶರಣಬಸವೇಶ್ವರರ ರಥೋತ್ಸವ, ಹಾಗೂ ಜಾತ್ರೆ ನಡೆಯುತ್ತದೆ ಈ ಜಾತ್ರೆಗೆ.ಲಕ್ಷಾಂತರ ಭಕ್ತರು ಸೇರತ್ತಾರೆ. ಆದ್ದರಿಂದ ಕಲಬುರಗಿ ವಿಮಾನ ನಿಲ್ದಾಣಕ್ಕೆ ಶರಣಬಸವೇಶ್ವರರ ಹೆಸರು ಇಡಬೇಕು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.