ಮುಧೋಳ, ಆಡಕಿ ಗ್ರಾಮಗಳ ಅತಿವೃಷ್ಟಿ ಬೆಳೆ ಹಾನಿ ಪರಿಶೀಲನೆ ನಡೆಸಿದ ಡಾ.ಶರಣಪ್ರಕಾಶ ಪಾಟೀಲ

ಮುಧೋಳ, ಆಡಕಿ ಗ್ರಾಮಗಳ ಅತಿವೃಷ್ಟಿ ಬೆಳೆ ಹಾನಿ ಪರಿಶೀಲನೆ ನಡೆಸಿದ ಡಾ.ಶರಣಪ್ರಕಾಶ ಪಾಟೀಲ
ಸೇಡಂ: ಅತಿಯಾದ ಮಳೆಯಿಂದ ಬೆಳೆ ಹಾನಿಗೊಳಗಾದ ಸೇಡಂ ತಾಲೂಕಿನ ಮುಧೋಳ, ಆಡಕಿ ಗ್ರಾಮಗಳ ಹೊಲಗಳಿಗೆ ತೆರಳಿ ಪರಿಶೀಲನೆ ನಡೆಸಿದ ಸಚಿವ ಡಾ.ಶರಣಪ್ರಕಾಶ ಪಾಟೀಲ, ಹಾನಿಗೊಳಗಾದ ಹೆಸರು ಬೀಜ ಕೈಯಲ್ಲಿಡಿದು ಕಳವಳ ವ್ಯಕ್ತಪಡಿಸಿದರು.
ಸೋಮವಾರ ಮುಧೋಳ, ಆಡಕಿ ಗ್ರಾಮಗಳಿಗೆ ಭೇಟಿ ನೀಡಿ, ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಸುತ್ತಾಡಿ, ತೊಗರಿ, ಹೆಸರು ಹಾಗೂ ಉದ್ದು ಬೆಳೆಗಳ ಸ್ಥಿತಿಯನ್ನು ಕಂಡು ಬೆಳೆ ಹಾನಿ ಪರಿಹಾರ ಒದಗಿಸುವಲ್ಲಿ ರೈತರಿಗೆ ಭರವಸೆ ನೀಡಿದರು.
ಸ್ಥಳದಲ್ಲಿಯೇ ಇದ್ದ ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಸೂಕ್ತ ಪರಿಹಾರ ನೀಡುವಂತೆ ಸೂಚನೆ ನೀಡಿದರು.
ಕೃಷಿ ಇಲಾಯಿಂದ ಒದಗುವ ಬೆಳೆ ಕಟಾವು ಯಂತ್ರಗಳ ಬಾಡಿಗೆ ಕಡಿಮೆ ದರದಲ್ಲಿ ನೀಡುವಂತೆಯೂ ಸಹ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಮುಧೋಳ, ಆಡಕಿ ಗ್ರಾಮದ ಮುಖಂಡರು, ರೈತರು ಉಪಸ್ಥಿತರಿದ್ದರು.