ಅತ್ಯಾಚಾರ, ಕೊಲೆ ಖಂಡಿಸಿ ಪ್ರತಿಭಟನೆ

ಅತ್ಯಾಚಾರ, ಕೊಲೆ ಖಂಡಿಸಿ ಪ್ರತಿಭಟನೆ
ಕಲಬುರಗಿ: ದೇಶದಾದ್ಯಂತ ನಡೆಯುತ್ತಿರುವ ಅತ್ಯಾಚಾರ, ಹಿಂಸೆ, ಕೊಲೆಯನ್ನು ಖಂಡಿಸಿ ಜನತಾ ಪರಿವಾರ ಸಂಘಟನೆ ಜಿಲ್ಲಾ ಘಟಕದ ವತಿಯಿಂದ ನಗರದ ಸರ್ದಾರ್ ವಲ್ಲಭಬಾಯಿ ಪಟೇಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಸಿರಾಜ್ ಶಾಬ್ದಿ ಮಾತನಾಡಿ, 'ದೇಶದಲ್ಲಿ ಪ್ರತಿ ೧೬ ನಿಮಿಷಕ್ಕೆ ಒಂದು ಅತ್ಯಾಚಾರ ಪ್ರಕರಣ ದಾಖಲಾಗುತ್ತಿದೆ. ಕೊಲೆ ಪ್ರಕರಣಗಳು ಸಹ ಹೆಚ್ಚಾಗುತ್ತಿವೆ. ಅದನ್ನು ತಡೆಯಲು ಕೇಂದ್ರ ಬಿಜೆಪಿ ಸರ್ಕಾರ ವಿಫಲವಾಗಿದೆ. ಭಾರತವು ಮಹಿಳೆಯರಿಗೆ ವಿಶ್ವದ ಅತ್ಯಂತ ಅಪಾಯಕಾರಿ ದೇಶಗಳಲ್ಲಿ ಒಂದಾಗಿದೆ ಎಂದು ತಿಳಿದುಬಂದಿದೆ' ಎಂದು ಹೇಳಿದರು.
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿAದ ೨೦೧೪ರಿಂದ ೨೦೨೩ರವರೆಗೆ ದೇಶದಲ್ಲಿ ೩.೫೦ ಲಕ್ಷ ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಅತ್ಯಾಚಾರ ಆರೋಪಿಗಳಿಗೆ ಕಡ್ಡಾಯವಾಗಿ ಜೀವಾವಧಿ ಶಿಕ್ಷೆ ವಿಧಿಸುವಂತೆ ತಿದ್ದುಪಡಿ ಕಾನೂನು ತರಬೇಕು' ಎಂದು ಆಗ್ರಹಿಸಿದರು. ಸಂಘಟನೆಯ ಶೇಖ್ ಸೈಫನ್, ಅಕಾಶ ರಿಡ್ಲಾನ್, ಕೃಷ್ಣಾ ಸರಡಗಿ, ಅಜರ್ ಮುಬಾರಕ್, ಸಾಬೀರ್ ಬಾರಿ, ಫಾತೀಮಾ ಪಟೇಲ್, ನಿಲೋಫರ್ ಹಕ್ಕಿಮ್, ಆಸೀಯಾ ಬೇಗಂ, ಶಬಾನಾ ಇತರರು ಹಾಜರಿದ್ದರು
.