ಲಂಡನಿನ ಬಸವಣ್ಣ ಪ್ರತಿಮೆಗೆ ಭೇಟಿ ನೀಡಿದ ಸಚಿವ ಡಾ.ಶರಣಪ್ರಕಾಶ

ಲಂಡನಿನ ಬಸವಣ್ಣ ಪ್ರತಿಮೆಗೆ ಭೇಟಿ ನೀಡಿದ ಸಚಿವ ಡಾ.ಶರಣಪ್ರಕಾಶ

ಲಂಡನಿನ ಬಸವಣ್ಣ ಪ್ರತಿಮೆಗೆ ಭೇಟಿ ನೀಡಿದ ಸಚಿವ ಡಾ.ಶರಣಪ್ರಕಾಶ

ವಿಶ್ವದ ಪ್ರಸಿದ್ಧ ಲಂಡನ್ ನಗರದ ಥೇಮ್ಸ್ ನದಿ ದಂಡೆಯ ಮೇಲೆ ಸ್ಥಾಪಿಸಲ್ಪಟ್ಟ ವಚನ ಕ್ರಾಂತಿಯ ಹರಿಹಾರ, ವಿಶ್ವಗುರು ಶ್ರೀ ಬಸವಣ್ಣನವರ ಪ್ರತಿಮೆಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಭೇಟಿ‌ ನೀಡಿ, ನಮಸ್ಕರಿಸಿದರು.

ಬಸವಣ್ಣನವರ ಪ್ರತಿಮೆ ಕಂಡ ಕ್ಷಣ ಬಸವಾದಿ ಶರಣರ ಪರಂಪರೆಯಲ್ಲಿ ನಡೆಯುವ ನಮ್ಮಂತಹವರಿಗೆ ಹೆಮ್ಮೆ ಎನಿಸುತ್ತದೆ ಎಂದು ಹರ್ಷ ವ್ಯಕ್ತಪಡಿಸಿದರು.

ಬಸವಣ್ಣನವರ ವಚನಗಳು ಇಂದಿಗೂ‌ ಪ್ರಸ್ತುತ ಎನಿಸುತ್ತದೆ‌. ಲಂಡನ್ ನಗರದ ಥೇಮ್ಸ್ ನದಿಯವರೆಗೂ ಬಸವಣ್ಣನವರ ಕೀರ್ತಿ ಹಬ್ಬಿರುವುದು ನಿಜಕ್ಕೂ ಹೆಮ್ಮೆಯ ವಿಷಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಸುಧಾಕರ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಬಂಡಾರಿ ಹಾಗೂ ಲಂಡನಿನ ನೀರಜ್ ಪಾಟೀಲ ಸೇರಿದಂತೆ ಸ್ಥಳೀಯ ಕನ್ನಡಿಗರು ಉಪಸ್ಥಿತರಿದ್ದರು.

(ಸಚಿವ ಡಾ ಶರಣಪ್ರಕಾಶ ಪಾಟೀಲರಿಗೆ ನೀರಜ ಪಾಟೀಲ ಶಾಲು ಹೊದಿಸಿ ಗೌರವಿಸಿದ ಚಿತ್ರ )