ವಾಡಿ ಯಲ್ಲಿ ಪ್ರಧಾನಿ ಮೋದಿ ಅವರು ಜನ್ಮದಿನದ ಪ್ರಯುಕ್ತ ಮಂದಿರದಲ್ಲಿ ವಿಶೇಷ ಪೂಜೆ

ವಾಡಿ ಯಲ್ಲಿ ಪ್ರಧಾನಿ ಮೋದಿ ಅವರು ಜನ್ಮದಿನದ ಪ್ರಯುಕ್ತ ಮಂದಿರದಲ್ಲಿ ವಿಶೇಷ ಪೂಜೆ
ವಾಡಿ:ಪ್ರಧಾನಮಂಲತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಬಿಜೆಪಿ ಮುಖಂಡರು ಪಟ್ಟಣದ ಶಕ್ತಿ ಆಂಜನೇಯ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ತನ್ನ ಜೀವನದುದ್ದಕ್ಕೂ ದೇಶದ ಒಳಿತಿಗಾಗಿ ಶ್ರಮಿಸುತ್ತಿರುವ ಮೋದಿಜಿ ಅವರು ಆಯಸ್ಸು ಆರೋಗ್ಯದಿಂದ ನೂರಾರು ವರ್ಷಗಳ ಬಾಳಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇವೆ ಎಂದರು.
ಪುರಸಭೆ ಮಾಜಿ ವಿರೋಧ ಪಕ್ಷದ ನಾಯಕ ಭೀಮಶಾ ಜಿರೋಳ್ಳಿ ಮಾತನಾಡಿ
ದೇಶದ ಕಟ್ಟಕಡೆಯ ವ್ಯಕ್ತಿಯೂ ಇಂದು ನಿರ್ಭೀತಿಯಿಂದ ನೆಮ್ಮದಿಯ ಜೀವನ ನಡೆಸುವಂತೆ ಮಾಡಿದ ಭಾರತ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬ ದಿನಾಚರಣೆಯ ಸಂಭ್ರಮವನ್ನು ನಾವು ಆಚರಿಸುತ್ತಿರುವುದು ನಮ್ಮಲ್ಲಿ ಹೆಮ್ಮೆಯು ಹಿಮ್ಮಡಿಸಿದೆ ಎಂದು ಹೇಳಿದರು.
ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಬಸವರಾಜ ಪಂಚಾಳ ಮಾತನಾಡಿದರು.
ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ರವಿ ನಾಯಕ,ಎಸ್ ಸಿ ಮೂರ್ಚ ಅಧ್ಯಕ್ಷ ದೌಲತರಾವ ಚಿತ್ತಾಪುರಕರ ಮುಖಂಡರಾದ ಶರಣಗೌಡ ಚಾಮನೂರ, ಅರ್ಜುನ ಕಾಳೆಕರ,ಭೀಮರಾವ ದೊರೆ,ಜಯದೇವ ಜೋಗಿಕಲಮಠ,ಶಿವಶಂಕರ ಕಾಶೆಟ್ಟಿ,ಕಿಶನ್ ಜಾಧವ್,ಪ್ರಕಾಶ ಪುಜಾರಿ,
ಮಲ್ಲಿಕಾರ್ಜುನ ಸಾತಖೇಡ,ಅಯ್ಯಣ್ಣ ದಂಡೋತಿ,ಯಂಕಮ್ಮ ಗೌಡಗಾಂವ,ಉಮಾಭಾಯಿ ಗೌಳಿ,ಪ್ರಕಾಶ ಬಡಿಗೇರ,ಕಾಳಪ್ಪ ಪಂಚಾಳ, ಶಂಕರ ಕುಲಕರ್ಣಿ ಸೇರಿದಂತೆ ನೂರಾರು ಕಾರ್ಯಕರ್ತರು ಮೋದಿಜಿ ಅವರಿಗೆ ಜಯಘೋಷ ಕೂಗಿ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.