ವಾಡಿ ಬಿಜೆಪಿ ಕಛೇರಿಯಲ್ಲಿ ಗಾಂಧಿಜಿ ಮತ್ತು ಶಾಸ್ತ್ರೀಜಿ ಜಯಂತಿ

ವಾಡಿ ಬಿಜೆಪಿ ಕಛೇರಿಯಲ್ಲಿ ಗಾಂಧಿಜಿ ಮತ್ತು ಶಾಸ್ತ್ರೀಜಿ ಜಯಂತಿ

ವಾಡಿ ಬಿಜೆಪಿ ಕಛೇರಿಯಲ್ಲಿ ಗಾಂಧಿಜಿ ಮತ್ತು ಶಾಸ್ತ್ರೀಜಿ ಜಯಂತಿ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜಯಂತಿ ಆಚರಿಸಲಾಯಿತು.

ಈ ವೇಳೆ ಪುರಸಭೆ ಮಾಜಿ ವಿರೋಧ ಪಕ್ಷದ ನಾಯಕ ಭೀಮಶಾ ಜಿರೋಳ್ಳಿ ಅವರು ಮಾತನಾಡಿ ನನ್ನ ಜೀವನವೇ ನನ್ನ ಸಂದೇಶ ಎಂದು ಜಗತ್ತಿಗೆ ಸಾರಿದ ಗಾಂಧೀಜಿಯವರು ತಮ್ಮ ಸರಳ‌ ಜೀವನ ಹಾಗೂ ಆದರ್ಶಗಳ ಮೂಲಕ ಗುರುತಿಸಲ್ಪಡುತ್ತಾರೆ. ಅಹಿಂಸಾತ್ಮಕ ಹೋರಾಟದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಅವರು ಇತರೆ ದೇಶಗಳ ಸ್ವಾತಂತ್ರ್ಯ ಹೋರಾಟಕ್ಕೂ ಸ್ಫೂರ್ತಿಯಾಗಿದ್ದರು.

ಅದೇ ರೀತಿ ಸರಳ ಮತ್ತು ಸೌಜನ್ಯಯುತ ನಡವಳಿಕೆಯನ್ನು ಹೊಂದಿದ್ದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರು ಕೂಡ ದೇಶದ ಪ್ರಗತಿಗೆ ಶ್ರಮಿಸಿದರು ಎಂದು ಸ್ಮರಿಸಿದರು.

ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಅವರು ಮಾತನಾಡಿ ಗಾಂಧೀಜಿಯವರ ತತ್ವಾದರ್ಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ. ವಿದೇಶಿಗರು ನಮ್ಮನ್ನು ಗಾಂಧೀ ನಾಡಿನವರು ಎಂದು ಗುರುತಿಸುವುದು ನಮಗೆಲ್ಲ‌ಹೆಮ್ಮೆಯ ವಿಷಯವಾಗಿದೆ ಎಂದರು.

ಸ್ವತಂತ್ರ ಭಾರತದ ಎರಡನೇ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ನೀಡಿದ ಜೈ ಜವಾನ್ ಮತ್ತು ಜೈ ಕಿಸಾನ್ ಘೋಷಣೆ ಮುಂದಿನ ಪೀಳಿಗೆಗೂ ಸ್ಫೂರ್ತಿಯಾಗಿದೆ. ದೇಶದ ಹೆಮ್ಮೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟರು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮುಖಂಡರಾದ ಭೀಮರಾವ ದೊರೆ, ಅರ್ಜುನ ಕಾಳೆಕರ,ಕಿಶನ ಜಾಧವ,ಯಂಕಮ್ಮ ಗೌಡಗಾಂವ, ಮಲ್ಲಿಕಾರ್ಜುನ ಸಾತಖೇಡ,ಅಯ್ಯಣ್ಣ ದಂಡೋತಿ,ಚಂದ್ರಶೇಖರ ಬೆಣ್ಣೂರಕರ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.