ಅಮ್ಮ ಪ್ರಶಸ್ತಿ’ಗೆ ಬೆಳ್ಳಿ ಹಬ್ಬ 25 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಅಮ್ಮ ಪ್ರಶಸ್ತಿ’ಗೆ ಬೆಳ್ಳಿ ಹಬ್ಬ
25 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ
ಕಲಬುರಗಿ, ಅ. 3 ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ `ಅಮ್ಮ ಪ್ರಶಸ್ತಿ’ ಪ್ರಖ್ಯಾತಿಯನ್ನು ಪಡೆದಿದ್ದು, ಇದೀಗ 25 ನೇ ವರ್ಷದ ಸಂಭ್ರಮದಲ್ಲಿದೆ. ಪತ್ರಕರ್ತ ಹಾಗೂ ಸಾಹಿತಿ ಮಹಿಪಾಲರೆಡ್ಡಿ ಮುನ್ನೂರ್ ಅವರು ತಮ್ಮ ತಾಯಿಯ ಸ್ಮರಣಾರ್ಥವಾಗಿ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ 25 ನೇ ವರ್ಷದ `ಅಮ್ಮ ಪ್ರಶಸ್ತಿ’ಗಾಗಿ 2024 ಮತ್ತು 2025 ನೇ ಸಾಲಿನಲ್ಲಿ ಪ್ರಕಟವಾದ ಕೃತಿಗಳನ್ನು ಆಹ್ವಾನಿಸಲಾಗಿದೆ.
ಕಳೆದ 24 ವರ್ಷಗಳಿಂದ ನಿರಂತರ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ನೀಡಲಾಗುತ್ತಿರುವ ಈಗ ಅಮ್ಮ ಪ್ರಶಸ್ತಿಗೆ 25 ರ ಸಂಭ್ರಮ. ಈ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದ ಪ್ರತಿಷ್ಠಿತ ‘ಅಮ್ಮ ಪ್ರಶಸ್ತಿ’ಗಾಗಿ ಸಾಹಿತ್ಯದ ಯಾವುದೇ ಪ್ರಕಾರದ ಕೃತಿಗಳ ಎರಡು ಪ್ರತಿಗಳನ್ನು ಕಳುಹಿಸಬಹುದು.
ಆಯ್ಕೆಯಾದ 5 ಕೃತಿಗಳಿಗೆ ತಲಾ 5 ಸಾವಿರ ನಗದು ಪುರಸ್ಕಾರ ಮತ್ತು ಸನ್ಮಾನ, ಗೌರವದ ಕಾಣಿಕೆ ನೀಡಿ ಸತ್ಕರಿಸಲಾಗುವುದು. ಕೃತಿಗಳನ್ನು ಸ್ವೀಕರಿಸಲು ಅಕ್ಟೋಬರ್ 30 ಕೊನೆಯ ದಿನಾಂಕವಾಗಿರುತ್ತದೆ ಎಂದು ಪ್ರತಿಷ್ಠಾನದ ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೃತಿಗಳನ್ನು ಕಳುಹಿಸಬೇಕಾದ ವಿಳಾಸ : ಶ್ರೀಮತಿ ರತ್ನಕಲಾ ಮಹಿಪಾಲರೆಡ್ಡಿ ಮುನ್ನೂರ್, ಸಂಚಾಲಕಿ, ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ "ಅಮ್ಮ ನಿಲಯ", ರಾಮಚಂದ್ರ ಲೇಔಟ್, ಪಿಡಬ್ಲೂಡಿ ಕಚೇರಿ ಹತ್ತಿರ, ಸೇಡಂ-585 222. ಕಲಬುರಗಿ ಜಿಲ್ಲೆ. ಹೆಚ್ಚಿನ ವಿವರಗಳಿಗಾಗಿ, ಮೊಬೈಲ್ ಸಂಖ್ಯೆ: 9731666052 ಸಂಪರ್ಕಿಸಬಹುದು.