ದಲಿತ ಸೇನೆಯ ನೂತನ ಪದಾಧಿಕಾರಿಗಳ ಆಯ್ಕೆ

ದಲಿತ ಸೇನೆಯ ನೂತನ ಪದಾಧಿಕಾರಿಗಳ ಆಯ್ಕೆ
ಕಲಬುರಗಿ: ಖ್ಯಾತ ವಕೀಲರು ಹಾಗೂ ದಲಿತ ಸೇನೆಯ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ ಹಾಗೂ ದಲಿತ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ ಭಂಡಾರಿ ಅವರ ನೇತೃತ್ವದಲ್ಲಿ ನೂತನ ಪದಾಧಿಕಾರಿಗಳ ನೇಮಕ ಸಭೆ ನಡೆಯಿತು.
ನಗರದ ಜಗತ್ ವೃತ್ತದ ಬಳಿ ಇರುವ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಅದೆ ಆವರಣದಲ್ಲಿ ದಲಿತ ಸೇನೆಯ ಕಾಳಗಿ ತಾಲೂಕಿನ ಅಧ್ಯಕ್ಷರಾಗಿ ಕತ್ತಲಪ್ಪ ಅಂಕ್ಕನ ಆಯ್ಕೆ ಹಾಗೂ ದಲಿತ ಸೇನೆಯ ಕಾರ್ಯಾಧ್ಯಕ್ಷರಾಗಿ ಮಾರುತಿ ತೇಗಲತ್ತಿಪ್ಪಿ ಆಯ್ಕೆ ಹಾಗೂ ಕಾಳಗಿ ತಾಲೂಕಿನ ಕಾರ್ಮಿಕ ಘಟಕದ ಅಧ್ಯಕ್ಷರಾಗಿ ಆಕಾಶ್ ಹೆಬ್ಬಾಳ ಅವರನ್ನು ಆಯ್ಕೆ ಮಾಡಿ ಅವರಿಗೆ ದಲಿತ ಸೇನೆಯ ಶಾಲು ಹೊದಿಸಿ ವಿಶೇಷವಾಗಿ ಸನ್ಮಾನಿಸಿ ಸಂಘಟನೆ ಬರಮಾಡಿಕೊಂಡರು.
ನೇಮಕಗೊAಡ ನೂತನ ಪದಾಧಿಕಾರಿಗಳಿಗೆ ದಲಿತ ಸೇನೆಯ ಸಿದ್ದಾಂತಕ್ಕೆ ತಕ್ಕಂತೆ ಜನರ ನೋವಿಗೆ ಶೋಷಣೆಗೆ ಸ್ಪಂದಿಸುವ ಕೆಲಸ ಮಾಡುವಂತೆ ದಲಿತ ಸೇನೆಯ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ ಅವರು ಸಲಹೆ ನೀಡಿದರು.
ಬಳಿಕ ಮಾತನಾಡಿದ ದಲಿತ ಸೇನೆಯ ಜಿಲ್ಲಾಧ್ಯಕ್ಷ ಮಂಜುನಾಥ ಭಂಡಾರಿ ಅವರು ದಲಿತ ಸೇನೆಯ ಕಾರ್ಯಕರ್ತರು ಯಾವಾಗಲೂ ಅನ್ಯಾಯದ ವಿರುದ್ಧ ಹೋರಾಟ ಮಾಡಬೇಕೆಂದು ನೂತನ ಪದಾಧಿಕಾರಿಗಳಿಗೆ ಕರೆ ನೀಡಿದರು. ಜಿಲ್ಲೆಯಾದ್ಯಂತ ದಲಿತ ಸೇನೆಯ ಹೆಸರಿನಲ್ಲಿ ಯಾರಾದರೂ ಅಧಿಕಾರಿಗಳಿಗೆ ಅಂಜಿಕೆ ಹಾಕುವುದು ಅಥವಾ ಸರ್ಕಾರಿ ಕಛೇರಿಗಳಲ್ಲಿ ದಲಿತ ಸೇನೆಯ ಹೆಸರಿನಲ್ಲಿ ನಿಮ್ಮಗೆ ತೊಂದರೆ ನೀಡುತ್ತಿದ್ದರೆ ಕೂಡಲೇ ಅವರನ್ನು ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಅಥವಾ ದಲಿತ ಸೇನೆಯ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ ಹಾಗೂ ಜಿಲ್ಲಾಧ್ಯಕ್ಷ ಮಂಜುನಾಥ ಭಂಡಾರಿ ಅವರಿಗೆ ಈ ತರಹದ ಘಟನೆಗಳು ಗಮನಕ್ಕೆ ತಂದಿದೆ ಆದ್ರೆ ದಲಿತ ಸೇನೆ ಅವರ ವಿರುದ್ಧ ಕ್ರಮ ಕೈಗೊಳ್ಳಲು ಸಿದ್ದರಿದ್ದೇವೆ ಎಂದು ಭಂಡಾರಿ ಅವರು ತಿಳಿಸಿದರು. ಈ ಸಂದರ್ಭದಲ್ಲಿ ಯುವ ಮುಖಂಡರಾದ ಸಂತೋಷ ಪಾಳಾ, ಅಷ್ಪಕ್ ಸೇರಿದಂತೆ ಇತರರು ಉಪಸ್ಥಿತರಿದ್ದರು.