ಉತ್ತಮ ಆರೋಗ್ಯ ಮತ್ತು ಮಾನಸಿಕ ಸ್ಪಷ್ಟತೆಗಾಗಿ ಸ್ವಚ್ಛತಾ ಕಾರ್ಯಕ್ರಮ ಮಹತ್ವದ ಅಭ್ಯಾಸವಾಗಿದೆ ಶಶೀಲ್ ಜಿ ನಮೋಶಿ

ಉತ್ತಮ ಆರೋಗ್ಯ ಮತ್ತು ಮಾನಸಿಕ ಸ್ಪಷ್ಟತೆಗಾಗಿ ಸ್ವಚ್ಛತಾ ಕಾರ್ಯಕ್ರಮ ಮಹತ್ವದ ಅಭ್ಯಾಸವಾಗಿದೆ  ಶಶೀಲ್ ಜಿ ನಮೋಶಿ

ಉತ್ತಮ ಆರೋಗ್ಯ ಮತ್ತು ಮಾನಸಿಕ ಸ್ಪಷ್ಟತೆಗಾಗಿ ಸ್ವಚ್ಛತಾ ಕಾರ್ಯಕ್ರಮ ಮಹತ್ವದ ಅಭ್ಯಾಸವಾಗಿದೆ ಶಶೀಲ್ ಜಿ ನಮೋಶಿ

ಕಲಬುರ್ಗಿ ನ16: ಶಾಲಾ,ಕಾಲೇಜು ಆವರಣ ಸ್ವಚ್ಛತೆ ಎಂಬುದು ಕೇವಲ ಶಾಲೆಯನ್ನು ಸ್ವಚ್ಛವಾಗಿರಿಸುವುದಷ್ಟೇ ಅಲ್ಲ, ಉತ್ತಮ ಆರೋಗ್ಯ, ಮಾನಸಿಕ ಸ್ಪಷ್ಟತೆ ಮತ್ತು ಶಿಸ್ತನ್ನು ಬೆಳೆಸುವ ಒಂದು ಮಹತ್ವದ ಅಭ್ಯಾಸವಾಗಿದೆ ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ ನಮೋಶಿ ಹೇಳಿದರು 

ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಸ್ ನಿಜಲಿಂಗಪ್ಪ ದಂತ ವೈದ್ಯಕೀಯ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದಲ್ಲಿ ಹಮ್ಮಿಕೊಂಡಿದ್ದ ಶ್ರಮದಾನ ಶಿಬಿರ ಉದ್ಘಾಟನೆ ಮಾಡಿ ಮಾತನಾಡುತ್ತಿದ್ದರು.

ಸ್ವಚ್ಛತೆಗಾಗಿ ಕಸವನ್ನು ಸರಿಯಾದ ಕಸದ ಬುಟ್ಟಿಯಲ್ಲಿ ಹಾಕುವುದು, ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದು, ತರಗತಿಗಳನ್ನು, ಶೌಚಾಲಯಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಮತ್ತು ಶಾಲಾ ಆವರಣದಲ್ಲಿ ಗಿಡಗಳನ್ನು ಬೆಳೆಸುವುದು ಮುಂತಾದ ಕ್ರಮಗಳನ್ನು ಕೈಗೊಳ್ಳಬೇಕು. ಇವುಗಳನ್ನು ಎಲ್ಲರೂ ಒಟ್ಟಾಗಿ ಮಾಡಿದಾಗ ಆರೋಗ್ಯಕರ ಮತ್ತು ಸಂತೋಷಕರ ಕಾಲೇಜು ವಾತಾವರಣ ನಿರ್ಮಾಣವಾಗುತ್ತದೆ ಎಂದು ಹೇಳಿದರು.

ನಮ್ಮ ಸಂಸ್ಥೆಯ ಎಸ್ ನಿಜಲಿಂಗಪ್ಪ ದಂತ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಇಂದಿನಿಂದ 7 ದಿನಗಳವರೆಗೆ ಸ್ವಚ್ಛತಾ ಶ್ರಮದಾನ ನಡೆಯುತ್ತಿದೆ ಕೇವಲ ಇದು ರಾಷ್ಟ್ರೀಯ ಸೇವಾ ಯೋಜನೆಯ ಒಂದು ಕಾರ್ಯಕ್ರಮವಾಗದೆ ನಮ್ಮ ಸಂಸ್ಥೆಯ ಪ್ರತಿಯೊಂದು ಶಾಲಾ ಕಾಲೇಜುಗಳು ತಮ್ಮ ಆವರಣಗಳನ್ನು , ಕೋಣೆಗಳನ್ನು ಸ್ವಚ್ಛವಾಗಿ ಇಡುವುದರ ಮೂಲಕ ಪರಿಸರ ಜಾಗೃತಿ ಮೂಡಿಸುವ ಕೆಲಸ ಮಾಡಬೇಕೆಂದು ಕರೆ ನೀಡಿದರು. ಇಂದಿನ ನಮ್ಮ ಯುವಕರು ಗುಟ್ಕಾ,ಸೀಗರೇಟ್ ಗಳ ದಾಸರಾಗುತ್ತಿದ್ದು ಇದರಿಂದ ಶಾಲಾ ಕಾಲೇಜುಗಳ ಪರಿಸರವು ಕಲುಷಿತಗೊಳ್ಳುತ್ತಿದೆ ಈ ನಿಟ್ಟಿನಲ್ಲಿ ಉಪನ್ಯಾಸಕರು ಅವುಗಳಿಂದ ಆಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಬೇಕು ಎಂದು ಹೇಳಿದರು. 

ಇದೆ ಸಂದರ್ಭದಲ್ಲಿ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಹಾಗೂ ಎಸ್ ನಿಜಲಿಂಗಪ್ಪ ದಂತ ವೈದ್ಯಕೀಯ ಮಹಾವಿದ್ಯಾಲಯದ ಸಂಚಾಲಕರಾದ ಡಾ ಅನಿಲಕುಮಾರ ಪಟ್ಟಣ ಮಾತನಾಡಿ ಈ ಸ್ವಚ್ಛತಾ ಶ್ರಮದಾನ ಶಿಬಿರ ಕೇವಲ 7 ದಿನಕ್ಕೆ ಸೀಮಿತವಾಗಿರದೆ ನಿರಂತರವಾಗಿ ನಡೆಯಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಇತ್ತಿಚೆಗೆ ನಿಧನರಾದ ವೃಕ್ಷ ಮಾತೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ನವರ ಗೌರವಾರ್ಥ ಮೌನಾಚರಣೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾದ ಡಾ ಗುರುಲಿಂಗಪ್ಪ ಪಾಟೀಲ್ ಕಾಲೇಜಿನ ಪ್ರಾಚಾರ್ಯರಾದ ಡಾ ಜಯಶ್ರೀ ಮುದ್ದಾ, ಸಂಸ್ಥೆಯ ಕ್ಯೂಎಸಿ ಸಂಚಾಲಕರಾದ ಡಾ ಉಮಾ ರೇವೂರ, ಡಾ ಸುಧಾ ಹಾಲಕಾಯಿ, ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಡಾ ಸುಭಾಷ್ ಪಾಟೀಲ್ ವಿ ಜಿ ಮಹಿಳಾ ಪದವಿ ಮಹಾವಿದ್ಯಾಲಯದ ಎನ್ ಎಸ್ ಎಸ್ ಅಧಿಕಾರಿಗಳಾದ ಡಾ ಸುಭಾಷ್ ದೊಡಮನಿ, ಡಾ ಶ್ರೀದೇವಿ ಸರಡಗಿ, ಡಾ ಶ್ವೇತಾ ಕಾರ್ಯಕ್ರಮ ನಿರೂಪಿಸಿದರು. ಈ ಶ್ರಮದಾನ ಶಿಬಿರದಲ್ಲಿ ವಿ ಜಿ ಮಹಿಳಾ ಮಹಾವಿದ್ಯಾಲಯ ಎನ್ ಎನ್ ಎಸ್ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.