ಕಲಬುರಗಿ ವಲಯದ ಯುವಜನೋತ್ಸವ ಕಾರ್ಯಕ್ರಮದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಣೆ

ಕಲಬುರಗಿ ವಲಯದ ಯುವಜನೋತ್ಸವ ಕಾರ್ಯಕ್ರಮದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಣೆ

ಕಲಬುರಗಿ ವಲಯದ ಯುವಜನೋತ್ಸವ ಕಾರ್ಯಕ್ರಮದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಣೆ

ಕಲಬುರಗಿ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ, ಸಿದ್ಧಾರ್ಥ ಕಾನೂನು ಮಹಾವಿದ್ಯಾಲಯ ಕಲಬುರಗಿ (ಐಕ್ಯೂಎಸಿ) ಸಂಯುಕ್ತಾಶ್ರಯದಲ್ಲಿ ಎರಡು ದಿನಗಳ ಕಾಲ ಕಲಬುರಗಿ ವಲಯದ ಯುವಜನೋತ್ಸವನ್ನು ನಗರದ ವಿಶ್ವೇಶ್ವರಯ್ಯಭವನದಲ್ಲಿ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮಕ್ಕೆ ಏಂಟು (8) ಕಾನೂನುಮಹಾವಿದ್ಯಾಲಯಗಳಿಂದ ಸುಮಾರು 200 ಕ್ಕೂ ಹೆಚ್ಚಿನ ಸ್ಪರ್ದಾಳುಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದು ಅಂದರೆ ಸಂಗೀತ, ನೃತ್ಯ, ನಾಟಕ, ಡೊಳ್ಳುಕುಣಿತ, ಭಾಷಣ, ಚರ್ಚಾ ಸ್ಪರ್ಧೆ ಹಾಗೂ ಕಲಾ ಸ್ಪರ್ಧೆಗಳಲ್ಲಿ ಭಾಗವಹಿಸಿ ಯುವ ಜನೋತ್ಸವವನ್ನು ಯಶ್ವಸ್ವಿಗೊಳಿಸಿದರು.

ಈ ಕಾರ್ಯಕ್ರಮದಲ್ಲಿ ಶರಣಬಸವ ವಿಶ್ವವಿದ್ಯಾಲಯ ಕುಲಸಚಿವ ಡಾ. ಸಣ್ಣಬಸನಗೌಡ ಜಿ ಡೋಳ್ಳೆಗೌಡ್ರ ಅವರು ವಿದ್ಯಾರ್ಥಿಗಳಿಗೆ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿ ವಿದ್ಯಾರ್ಥಿಗಳು ಅಧ್ಯಯನದ ಜೊತೆಗೆ ಇನ್ನಿತರಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ತಮ್ಮ ವ್ಯಕ್ತಿತ್ವವನ್ನು ಸರಿಯಾದ ರೀತಿಯಲ್ಲಿ ಬೆಳೆಸಿಕೊಂಡು ತಮ್ಮ ವೃತ್ತಿಜೀವನವನ್ನು ಹಾಗೂ ಶಿಕ್ಷಣಭಾಗದಲ್ಲಿ ಒಳ್ಳೆಯವ್ಯಕ್ತಿಯಾಗಿ ಬೆಳೆಯಬೇಕೆಂದು ಸಂದೇಶ ನೀಡಿದರು.

ಕಲಬುರಗಿ ವಲಯದ ಯುವಜನೋತ್ಸವದಲ್ಲಿ ಸಿದ್ಧಾರ್ಥಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು ಅತಿ ಹೆಚ್ಚು ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದುಕೊಂಡು ಕಲಬುರಗಿ ವಲಯ ಯುವಜನೋತ್ಸವದ ಚಾಂಪಿಯನ್ಸ್ ಆಗಿ ಹೊರಹೊಮ್ಮಿದ್ದಾರೆ. ಹಾಗೂ ದ್ವಿತೀಯಸ್ಥಾನವನ್ನುಜೆ.ಎನ್‌ಆರ್. ಲಡ್ಡಾ ಕಾನೂನು ಮಹಾವಿದ್ಯಾಲಯ ಸೇಡಂ ನವರು ಪಡೆದುಕೊಂಡು ರನ್ನರ್ ಅಪ್ ಆಗಿದ್ದಾರೆ. ಕರ್ನಾಟಕ ಪೀಪಲ್ಸ್ ಎಜುಕೇಶನ್ ಸೊಸೈಟಿಯಕಾರ್ಯದರ್ಶಿಗಳಾದ ಶಾಂತಪ್ಪಸೂರನ, ಆಡಳಿತಅಧಿಕಾರಿಯಾದ ಡಾ. ಚಂದ್ರಶೇಖರ್ ಶೀಲವಂತ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. 

ಈ ಕಾರ್ಯಕ್ರಮವನ್ನು ಸಿದ್ಧಾರ್ಥ ಕಾನೂನುಮಹಾವಿದ್ಯಾಲಯ ಪ್ರಾಂಶುಪಾಲರಾದ ಡಾ. ಚಂದ್ರಶೇಖರ ಎಸ್, ಕಾರ್ಯಕ್ರಮದ ಸಂಚಾಲಕರಾದ ಡಾ. ತಿಪ್ಪೆಸ್ವಾಮಿ ಸಂಯೋಜನ ಅಧಿಕಾರಿಯಾದ ಮಹಾಂತೇಶ್ ಬಿದನೂರ್ ಮತ್ತು ಕಾಲೇಜಿನ ಎಲ್ಲಾ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು

.