ಕಲಬುರ್ಗಿ: ಶಿಕ್ಷಕರ ಭವನಕ್ಕೆ ನಿವೇಶನ ಮಂಜೂರು – ಸಚಿವ ಪ್ರಿಯಾಂಕ ಖರ್ಗೆ ರವರಿಗೆ ಶಿಕ್ಷಕರ ಧನ್ಯವಾದ
ಕಲಬುರ್ಗಿ: ಶಿಕ್ಷಕರ ಭವನಕ್ಕೆ ನಿವೇಶನ ಮಂಜೂರು – ಸಚಿವ ಪ್ರಿಯಾಂಕ ಖರ್ಗೆ ರವರಿಗೆ ಶಿಕ್ಷಕರ ಧನ್ಯವಾದ
ಕಲಬುರ್ಗಿ ಜಿಲ್ಲೆಯ ಸಮಸ್ತ ಪ್ರೌಢಶಾಲಾ ಶಿಕ್ಷಕರ ಪರವಾಗಿ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್, ಐ.ಟಿ–ಬಿ.ಟಿ ಸಚಿವರು ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಪ್ರಿಯಾಂಕ ಖರ್ಗೆ ರವರಿಗೆ ಧನ್ಯವಾದ ಸಲ್ಲಿಸಲಾಯಿತು.
ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ, ಜಿಲ್ಲಾ ಘಟಕ ಕಲಬುರ್ಗಿಗೆ ಕಲಬುರ್ಗಿ ನಗರಾಭಿವೃದ್ಧಿ ಪ್ರಾಧಿಕಾರ ವತಿಯಿಂದ ಶೇಖರೋಜಾ ಸರ್ವೆ ನಂ. 111/2 ರಲ್ಲಿ 25,166 ಚದುರ ಅಡಿ ಸಿ.ಎ. ನಿವೇಶನವನ್ನು ರಿಯಾಯಿತಿ ದರದಲ್ಲಿ 30 ವರ್ಷಗಳ ಅವಧಿಗೆ ಲೀಸ್ ನೀಡಲು ದಿನಾಂಕ 02-01-2026 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಜಿಲ್ಲೆಯಲ್ಲಿ ಶಿಕ್ಷಕರ ಭವನ ನಿರ್ಮಾಣಕ್ಕೆ ಅಗತ್ಯವಿರುವ ನಿವೇಶನವನ್ನು ರಿಯಾಯಿತಿ ದರದಲ್ಲಿ ಒದಗಿಸಲು ವಿಶೇಷ ಮುತುವರ್ಜಿ ವಹಿಸಿ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರಕಿಸಲು ಪ್ರಮುಖ ಪಾತ್ರ ವಹಿಸಿದ ಸಚಿವ ಪ್ರಿಯಾಂಕ ಖರ್ಗೆ ರವರಿಗೆ ಜಿಲ್ಲೆಯ ಸಮಸ್ತ ಪ್ರೌಢಶಾಲಾ ಶಿಕ್ಷಕರ ಪರವಾಗಿ ಕೃತಜ್ಞತೆ ಸಲ್ಲಿಸಲಾಯಿತು.
ಅದೇ ಸಂದರ್ಭದಲ್ಲಿ ನಿವೇಶನ ಮಂಜೂರಿಗೆ ಪರೋಕ್ಷ ಬೆಂಬಲ ನೀಡಿದ ಕಲಬುರ್ಗಿ ದಕ್ಷಿಣ ಕ್ಷೇತ್ರದ ಶಾಸಕರಾದ ಅಲ್ಲಮಪ್ರಭು ಪಾಟೀಲ್, ಜೆಸ್ಕಾಂ ಅಧ್ಯಕ್ಷರಾದ ಶ್ರೀ ಪ್ರವೀಣ್ ಪಾಟೀಲ್ ಹರವಾಳ, ಕಲಬುರ್ಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಜಹರ್ ಆಲಂ ಖಾನ್ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೂ ಧನ್ಯವಾದಗಳನ್ನು ತಿಳಿಸಲಾಯಿತು.
ಶಿಕ್ಷಕರ ಶೈಕ್ಷಣಿಕ ಹಾಗೂ ಸಂಘಟನಾ ಚಟುವಟಿಕೆಗಳಿಗೆ ನೆರವಾಗುವ ಉದ್ದೇಶದಿಂದ ಶಿಕ್ಷಕರ ಭವನ ನಿರ್ಮಾಣಕ್ಕೆ ನಿವೇಶನ ಮಂಜೂರು ಮಾಡಿರುವುದಕ್ಕೆ ಕರ್ನಾಟಕ ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಹೇಶ ಹೂಗಾರ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಬಳುಂಡಗಿ, ಶಿಕ್ಷಕರ ಸಂಘದ ಕಾರ್ಯದರ್ಶಿಗಳಾದ ಜಮೀಲ್, ಇಮ್ರಾನ್ ಅಹಮದ್ ಸೇರಿದಂತೆ ಪದಾಧಿಕಾರಿಗಳಾದ ರಾಜೇಶ್ ನೀಲಹಳ್ಳಿ, ಮಲ್ಲಿಕಾರ್ಜುನ ಸಲಗರ, ರಾಘವೇಂದ್ರ ರೆಡ್ಡಿ, ಮೊಹಮ್ಮದ್ ರಫೀಕ್, ದೇವೇಂದ್ರ ಬಿರಾದಾರ್, ಚನ್ನಬಸಪ್ಪ ಬಿರಾದಾರ್, ಬಾಷಾ ಪಟೇಲ್, ರೇಣುಕಾ ಡಾಂಗೆ, ಭಾಗ್ಯಲಕ್ಷ್ಮಿ ಗಿರೇಗೋಳ ಹಾಗೂ ನೌಕರರ ಸಂಘದ ಪದಾಧಿಕಾರಿಗಳಾದ ಚಂದ್ರಕಾಂತ್ ಏರಿ, ಧರ್ಮರಾಯ ಜವಳಿ, ಎಂ.ಬಿ. ಪಾಟೀಲ್, ಸಂತೋಷ್ ಗಂಗೂ ಸೇರಿದಂತೆ ಎಲ್ಲಾ ತಾಲೂಕು ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.
-
