ವಾಡಿ ಬಿಜೆಪಿ ಕಛೇರಿಯಲ್ಲಿ ಗಣರಾಜ್ಯೋತ್ಸವದ ಸಂಭ್ರಮ
ವಾಡಿ ಬಿಜೆಪಿ ಕಛೇರಿಯಲ್ಲಿ ಗಣರಾಜ್ಯೋತ್ಸವದ ಸಂಭ್ರಮ
ವಾಡಿ: ಪಟ್ಣದ ಬಿಜೆಪಿ ಕಛೇರಿಯಲ್ಲಿ 77ನೇ ಗಣರಾಜ್ಯೋತ್ಸವ ಆಚರಿಸಲಾಯಿತು.
ಮುಖಂಡರಾದ ವಿಠಲ ನಾಯಕ ಬಸವರಾಜ ಪಂಚಾಳ ಅವರು ಮಹಾತ್ಮ ಗಾಂಧೀಜಿ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಈ ವೇಳೆ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಧ್ವಜಾರೋಹಣ ನೆರವೇರಿಸಿ
ಮಾತನಾಡಿದ ಅವರು ರಾಜ ಪ್ರಭುತ್ವವನ್ನು ತ್ಯಜಿಸಿ ಪ್ರಜಾಪ್ರಭುತ್ವದಲ್ಲಿ ತನ್ನ ನಿಜ ಅಸ್ಥಿತ್ವವನ್ನು ಸ್ಥಾಪಿಸಿದ ಈ ದಿನ ನಮ್ಮ ಪಾಲಿಗೆ ಅತ್ಯಂತ ಮಹತ್ವದ ದಿನವಾಗಿದೆ.
ಡಾ. ಬಿ.ಆರ್.ಅಂಬೇಡ್ಕರ್ ಅವರಂಥಹ ಮಹಾನ್ ಮಾನವತಾವಾದಿಗಳು ರಾಷ್ಟ್ರದ ಅಭಿವೃದ್ಧಿಯ ಬಗೆಗೆ ಹಗಲಿರುಳೆನ್ನದೆ ಚಿಂತಿಸಿ ರಚಿಸಿದ ಸಂವಿಧಾನವು ನಮ್ಮ ಭವ್ಯಭಾರತಕ್ಕೆ ದಾರಿದೀಪವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ರವಿ ನಾಯಕ, ಎಸ್ ಸಿ ಮೂರ್ಚಾ ಅಧ್ಯಕ್ಷ ದೌಲತರಾವ ಚಿತ್ತಾಪುರಕರ,ಮುಖಂಡರಾದ ಯಮನಪ್ಪ ಪುಜಾರಿ,ಹರಿ ಗಲಾಂಡೆ,ಅರ್ಜುನ ಕಾಳೆಕರ,ಶರಣಗೌಡ ಚಾಮನೂರ,ಕಿಶನ ಜಾಧವ, ಪ್ರಕಾಶ ಪುಜಾರಿ,ಶಿವಶಂಕರ ಕಾಶೆಟ್ಟಿ,ಅಶೋಕ ಪವಾರ,ರಿಚರ್ಡ್ ಮಾರೆಡ್ಡಿ,
ರಾಜು ಪವಾರ,ಅಯ್ಯಣ್ಣ ದಂಡೋತಿ,ಮಲ್ಲಿಕಾರ್ಜುನ ಸಾತಖೇಡ,ಹಣಮಂತ ಚವ್ಹಾಣ, ಕಾಶಿನಾಥ ಶೆಟಗಾರ,
ನಾಮದೇವ ರಾಠೊಡ,ಮಹೇಂದ್ರ ಕುಮಾರ ಪುಜಾರಿ,ಪ್ರೇಮ ರಾಠೊಡ,
ಸಂತೋಷ ದಹಿಹಂಡೆ,ವಿಶಾಲ ನಿಂಬರ್ಗಾ,
ಯಂಕಮ್ಮ ಗೌಡಗಾಂವ,ನಿರ್ಮಲ ಇಂಡಿ,ಉಮಾಭಾಯಿ ಗೌಳಿ,ಶರಣಮ್ಮ ಯಾದಗಿರಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
