ನರೇಗಲ್ನಲ್ಲಿ ಸಂತೋಷ ಲಾಡ್ ಅವರ 52ನೇ ಜನ್ಮ ದಿನಾಚರಣೆ
ನರೇಗಲ್ನಲ್ಲಿ ಸಂತೋಷ ಲಾಡ್ ಅವರ 52ನೇ ಜನ್ಮ ದಿನಾಚರಣೆ
ಗದಗ, ಫೆ.25: ಸಂತೋಷ ಲಾಡ್ ಅವರ 52ನೇ ಜನ್ಮ ದಿನಾಚರಣೆಯ ಅಂಗವಾಗಿ ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ ವತಿಯಿಂದ ಫೆಬ್ರವರಿ 27ರಂದು ನರೇಗಲ್ನಲ್ಲಿ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಟ್ರಸ್ಟ್ನ ಜಿಲ್ಲಾ ಅಧ್ಯಕ್ಷ ಶಿವಾನಂದ ಗೋಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಮಿಕ ಸಚಿವರಾಗಿದ್ದು, ಧಾರವಾಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವ ಸಂತೋಷ ಲಾಡ್ ಅವರ ಜನ್ಮದಿನದ ನಿಮಿತ್ತ ರಾಜ್ಯದ 20 ಜಿಲ್ಲೆಗಳಲ್ಲಿ ಒಟ್ಟು ಸಾವಿರಕ್ಕೂ ಹೆಚ್ಚು ಕಾರ್ಮಿಕರು ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ನರೇಗಲ್ನ ಅನ್ನದಾನೇಶ್ವರ ಸಂಸ್ಥೆಯ ಕಿವುಡ ಮತ್ತು ಮೂಕ ಶಾಲೆಯ ಮಕ್ಕಳಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ. ಅಲ್ಲದೆ, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಹಣ್ಣು, ಹಾಲು ಹಾಗೂ ಬ್ರೆಡ್ ವಿತರಿಸುವ ಮೂಲಕ ಮಾನವೀಯ ಸೇವೆ ಸಲ್ಲಿಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಬೋವಿ ಸಮಾಜದ ಅಧ್ಯಕ್ಷ ಪೋತರಾಜ ಮಣ್ಣೂಡ್ಡರ, ಗಣೇಶ ನವಲಗುಂದ, ಹನುಮಂತ ಕರಮುಡಿ ಹಾಗೂ ಹಸನಸಾಬ ಕೊಪ್ಪಳ ಉಪಸ್ಥಿತರಿದ್ದರು.
ವರದಿ: ಶ್ರೀ ಹುಚ್ಚೀರಪ್ಪ ವೀರಪ್ಪ ಈಟಿ, ಕಲ್ಯಾಣ ಕಹಳೆ, ಗದಗ.
