ಪ್ರಿಯಾಂಕ್ ಖರ್ಗೆ ಡಿಸಿಎಂ ಆಗಲಿ : ಡಾ.ಮಲ್ಲಣಪ್ಪ ಮಹಾಸ್ವಾಮಿಗಳು
ಪ್ರಿಯಾಂಕ್ ಖರ್ಗೆ ಡಿಸಿಎಂ ಆಗಲಿ : ಡಾ.ಮಲ್ಲಣಪ್ಪ ಮಹಾಸ್ವಾಮಿಗಳು
ಶಹಾಬಾದ : - ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವಂತೆ ತೋನಸನಹಳ್ಳಿ (ಎಸ) ಗ್ರಾಮದ ಅಲ್ಲಮ ಪ್ರಭು ಸಂಸ್ಥಾನ ಮಠದ ಶ್ರೀ ಡಾ.ಮಲ್ಲಣಪ್ಪ ಮಹಾಸ್ವಾಮಿಗಳು ತಿಳಿಸಿದ್ದಾರೆ.
ಮಾದ್ಯಮದ ಜೊತೆ ಮಾತನಾಡಿದ, ಶ್ರೀಗಳು, ಬುದ್ಧ, ಬಸವ, ಡಾ.ಅಂಬೇಡ್ಕರ್ ಹಾಗೂ ಸಂವಿಧಾನದ ಮೇಲೆ ನಂಬಿಕೆಯಿಟ್ಟು ರಾಜ್ಯ ರಾಜಕಾರಣದಲ್ಲಿ ಮಾದರಿ ಸಚಿವರಾಗಿರುವ ಪ್ರಿಯಾಂಕ್ ಖರ್ಗೆ ಅಭಿವೃದ್ಧಿಯ ಹರಿಕಾರರಾಗಿದ್ದಾರೆ.
ಈ ರಾಜ್ಯದ ಉಪ ಮುಖ್ಯಮಂತ್ರಿಯಾದರೆ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿ ಹೊಂದುತ್ತದೆ ಎಂದು ಡಾ. ಮಲ್ಲಣಪ್ಪ ಮಹಾಸ್ವಾಮಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
