ಬಿಜೆಪಿ ಗ್ರಾಮಾಂತರ ಜಿಲ್ಲಾ ರೈತ ಮೋರ್ಚಾ ಖಜಾಂಚಿಯಾಗಿ ಮಲ್ಲಿನಾಥ ಪಾಟೀಲ ಕಾಳಗಿ ನೇಮಕ
ಬಿಜೆಪಿ ಗ್ರಾಮಾಂತರ ಜಿಲ್ಲಾ ರೈತ ಮೋರ್ಚಾ ಖಜಾಂಚಿಯಾಗಿ ಮಲ್ಲಿನಾಥ ಪಾಟೀಲ ಕಾಳಗಿ ನೇಮಕ
ಕಲಬುರಗಿ: ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಕಲಬುರಗಿ ಗ್ರಾಮಾಂತರ ಜಿಲ್ಲಾ ರೈತ ಮೋರ್ಚಾದ ಖಜಾಂಚಿಯಾಗಿ ಮಲ್ಲಿನಾಥ ಪಾಟೀಲ ಕಾಳಗಿ ಅವರನ್ನು ನೇಮಕ ಮಾಡಲಾಗಿದೆ.
ಬಿಜೆಪಿ ಕಲಬುರಗಿ ಗ್ರಾಮಾಂತರ ಜಿಲ್ಲಾಧ್ಯಕ್ಷರ ಆದೇಶದ ಮೇರೆಗೆ ಈ ನೇಮಕ ಮಾಡಲಾಗಿದ್ದು, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಬಸವರಾಜ ಮಾಲೀಪಾಟೀಲ ಕಮಲಾಪೂರ ಅವರು ನೇಮಕಾತಿ ಆದೇಶ ಹೊರಡಿಸಿದ್ದಾರೆ.
ಪಕ್ಷದ ತತ್ವ-ಸಿದ್ಧಾಂತಗಳಿಗೆ ಬದ್ಧರಾಗಿ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವಂತೆ ಹಾಗೂ ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಮತ್ತಷ್ಟು ಬಲಪಡಿಸಿ, ಮುಂಬರುವ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ಮೂಲಕ ಪಕ್ಷದ ವರ್ಚಸ್ಸು ಹೆಚ್ಚಿಸಲು ಶ್ರಮಿಸುವಂತೆ ಬಸವರಾಜ ಮಾಲೀಪಾಟೀಲ ಕಮಲಾಪೂರ ಅವರು ಮಲ್ಲಿನಾಥ ಪಾಟೀಲ ಕಾಳಗಿ ಅವರಿಗೆ ಶುಭ ಹಾರೈಸಿದ್ದಾರೆ.
ಈ ಸಂದರ್ಭದಲ್ಲಿ ಬಸವರಾಜ್ ಕುಕುನೂರ್, ಷಣ್ಮುಖ, ಶಿಬರ್ ಬಂಡಿ, ಮಲ್ಲಣ್ಣ ಕುಲಕರ್ಣಿ ಸುರೇಶ್ ರಾಥೋಡ್ ಉಪಸ್ಥಿತರಿದ್ದರು.

