ಸ್ವಾತಂತ್ರ್ಯ ದಿನಾಚರಣೆ ಸಂಸ್ಥೆಯ ಮೌಲ್ಯಗಳನ್ನು ನೆನಪಿಸಲು ಸಹಾಯ ಮಾಡುತ್ತದೆ ಶಶೀಲ್ ಜಿ ನಮೋಶಿ
ಸ್ವಾತಂತ್ರ್ಯ ದಿನಾಚರಣೆ ಸಂಸ್ಥೆಯ ಮೌಲ್ಯಗಳನ್ನು ನೆನಪಿಸಲು ಸಹಾಯ ಮಾಡುತ್ತದೆ ಶಶೀಲ್ ಜಿ ನಮೋಶಿ
ಕಲಬುರ್ಗಿ: ಸಂಸ್ಥೆಗಳು ಮತ್ತು ಕಚೇರಿಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯು ನೌಕರರಲ್ಲಿ ದೇಶಭಕ್ತಿ ಮೂಡಿಸಲು, ಪರಸ್ಪರ ಒಗ್ಗಟ್ಟು ಹೆಚ್ಚಿಸಲು ಮತ್ತು ಸಂಸ್ಥೆಯ ಮೌಲ್ಯಗಳನ್ನು ನೆನಪಿಸಲು ಸಹಾಯ ಮಾಡುತ್ತದೆ. ಇದು ರಾಷ್ಟ್ರೀಯ ಹೆಮ್ಮೆಯನ್ನು ತಂದುಕೊಡುವುದರೊಂದಿಗೆ ಕೆಲಸದ ಸ್ಥಳದಲ್ಲಿ ಸಕಾರಾತ್ಮಕ ವಾತಾವರಣ ನಿರ್ಮಿಸುತ್ತದೆ ಎಂದು ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಹೇಳಿದರು.
ಅವರು ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಮುಖ್ಯ ಕಚೇರಿಯಲ್ಲಿ ನಡೆದ 80 ನೇ ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಿದ್ದರು.
ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನವನ್ನು 'ವಿಕಸಿತ ಭಾರತಕ್ಕಾಗಿ ಯುವ ಶಕ್ತಿ 2047' ಎಂಬ ವಿಷಯದೊಂದಿಗೆ ಆಚರಿಸುತ್ತಿದೆ. ಮಾತರಂನ 150 ವರ್ಷಗಳು' ಸ್ಮರಣಾರ್ಥವಾಗಿ ಆಚರಣೆ ಮಾಡಲಾಗುತ್ತಿದೆ. ಈ ಥೀಮ್ 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವಾಗಿ ಪರಿವರ್ತಿಸುವಲ್ಲಿ ದೇಶದ ಯುವಕರ ಪ್ರಮುಖ ಪಾತ್ರವನ್ನು ಎತ್ತಿ ತೋರಿಸುತ್ತದೆ. 2047ರಲ್ಲಿ ಭಾರತವು ತನ್ನ ಸ್ವಾತಂತ್ರ್ಯದ 100 ವರ್ಷಗಳನ್ನು ಪೂರ್ಣಗೊಳಿಸಲಿದೆ. ಈ ಐತಿಹಾಸಿಕ ಮೈಲಿಗಲ್ಲನ್ನು ಗಮನದಲ್ಲಿಟ್ಟುಕೊಂಡು ರಾಷ್ಟ್ರದ ದೃಷ್ಟಿಕೋನವು ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವಾಗಿ ಪರಿವರ್ತಿಸುವತ್ತ ಕೇಂದ್ರೀಕೃತವಾಗಿದೆ ಎಂದು ಹೇಳಿದರು
ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ರಾಜಾ ಭಿ ಭೀಮಳ್ಳಿ, ಕಾರ್ಯದರ್ಶಿ ಉದಯಕುಮಾರ್ ಚಿಂಚೋಳ್ಳಿ, ಆಡಳಿತ ಮಂಡಳಿ ಸದಸ್ಯರಾದ ಡಾ ಶರಣಬಸಪ್ಪ ಹರವಾಳ, ಡಾ ಮಹಾದೇವಪ್ಪ ರಾಂಪೂರೆ,ಸಾಯಿನಾಥ್ ಪಾಟೀಲ,ಡಾ ಅನಿಲಕುಮಾರ ಪಟ್ಟಣ ಹಾಗೂ ಆಡಳಿತಾಧಿಕಾರಿಗಳಾದ ಡಾ ಎಸ್ ಎಲ್ ಹಿರೇಮಠ, ರಜೀಸ್ಟರರ್ ಜಯಂತ್ ಉಡುಪ ಹಾಗೂ ಎಲ್ಲ ಸಿಬ್ಬಂದಿ ಉಪಸ್ಥಿತರಿದ್ದರು

